BREAKING NEWS

ರಷ್ಯಾದ ಲೂನಾ-25 ಲ್ಯಾಂಡರ್ ಚಂದ್ರನ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ವಿಫಲ

ಮಾಸ್ಕೋ : ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಂದ್ರನ ತನ್ನ ನಿಗದಿತ ಪೂರ್ವ-ಲ್ಯಾಂಡಿಂಗ್ ಕಕ್ಷೆಯನ್ನ ಪ್ರವೇಶಿಸುವಲ್ಲಿ ವಿಫಲವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಲೂನಾ-25 ಶನಿವಾರ ಕಕ್ಷೆ ಪ್ರವೇಶಿಸಬೇಕಿತ್ತು. ಆದರೆ ತುರ್ತು ಪರಿಸ್ಥಿತಿಗಳಿಂದಾಗಿ ಪೂರ್ವ ಲ್ಯಾಂಡಿಂಗ್ ಕಕ್ಷೆ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ನಿಗಮ ರೋಸ್ಕೋಸ್ಮಾಸ್ ತಿಳಿಸಿದೆ. ಈ ಬಗ್ಗೆ ರಷ್ಯಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ತಂಡ ಪರಿಶೀಲನೆ ಮಾಡುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದೆ ಎಂದು ಹೇಳಿದೆ.

ಆಗಸ್ಟ್ 10 ರಂದು ರಷ್ಯಾ ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ದ್ರುವದಲ್ಲಿ ಇಳಿಯಲು ನಿರ್ಧರಿಸಲಾಗಿತ್ತು. ಆದರೆ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ಲೂನಾ-25 ವಿಫಲವಾಗಿದೆ ಎಂದು ಹೇಳಲಾಗಿದೆ. ಸದ್ಯ ಯೋಜನೆ ನಿಂತಿದೆಯೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಇನ್ನೂ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

lokesh

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

3 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

7 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago