BREAKING NEWS

ರಷ್ಯಾದ ಲೂನಾ-25 ಲ್ಯಾಂಡರ್ ಚಂದ್ರನ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ವಿಫಲ

ಮಾಸ್ಕೋ : ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಂದ್ರನ ತನ್ನ ನಿಗದಿತ ಪೂರ್ವ-ಲ್ಯಾಂಡಿಂಗ್ ಕಕ್ಷೆಯನ್ನ ಪ್ರವೇಶಿಸುವಲ್ಲಿ ವಿಫಲವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಲೂನಾ-25 ಶನಿವಾರ ಕಕ್ಷೆ ಪ್ರವೇಶಿಸಬೇಕಿತ್ತು. ಆದರೆ ತುರ್ತು ಪರಿಸ್ಥಿತಿಗಳಿಂದಾಗಿ ಪೂರ್ವ ಲ್ಯಾಂಡಿಂಗ್ ಕಕ್ಷೆ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ನಿಗಮ ರೋಸ್ಕೋಸ್ಮಾಸ್ ತಿಳಿಸಿದೆ. ಈ ಬಗ್ಗೆ ರಷ್ಯಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ತಂಡ ಪರಿಶೀಲನೆ ಮಾಡುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದೆ ಎಂದು ಹೇಳಿದೆ.

ಆಗಸ್ಟ್ 10 ರಂದು ರಷ್ಯಾ ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ದ್ರುವದಲ್ಲಿ ಇಳಿಯಲು ನಿರ್ಧರಿಸಲಾಗಿತ್ತು. ಆದರೆ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ಲೂನಾ-25 ವಿಫಲವಾಗಿದೆ ಎಂದು ಹೇಳಲಾಗಿದೆ. ಸದ್ಯ ಯೋಜನೆ ನಿಂತಿದೆಯೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಇನ್ನೂ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

lokesh

Recent Posts

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

3 mins ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

24 mins ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

1 hour ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

1 hour ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

2 hours ago

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…

2 hours ago