ಮಾಸ್ಕೋ : ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಂದ್ರನ ತನ್ನ ನಿಗದಿತ ಪೂರ್ವ-ಲ್ಯಾಂಡಿಂಗ್ ಕಕ್ಷೆಯನ್ನ ಪ್ರವೇಶಿಸುವಲ್ಲಿ ವಿಫಲವಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಲೂನಾ-25 ಶನಿವಾರ ಕಕ್ಷೆ ಪ್ರವೇಶಿಸಬೇಕಿತ್ತು. ಆದರೆ ತುರ್ತು ಪರಿಸ್ಥಿತಿಗಳಿಂದಾಗಿ ಪೂರ್ವ ಲ್ಯಾಂಡಿಂಗ್ ಕಕ್ಷೆ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ನಿಗಮ ರೋಸ್ಕೋಸ್ಮಾಸ್ ತಿಳಿಸಿದೆ. ಈ ಬಗ್ಗೆ ರಷ್ಯಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ತಂಡ ಪರಿಶೀಲನೆ ಮಾಡುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದೆ ಎಂದು ಹೇಳಿದೆ.
ಆಗಸ್ಟ್ 10 ರಂದು ರಷ್ಯಾ ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ದ್ರುವದಲ್ಲಿ ಇಳಿಯಲು ನಿರ್ಧರಿಸಲಾಗಿತ್ತು. ಆದರೆ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ಲೂನಾ-25 ವಿಫಲವಾಗಿದೆ ಎಂದು ಹೇಳಲಾಗಿದೆ. ಸದ್ಯ ಯೋಜನೆ ನಿಂತಿದೆಯೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.
ಇನ್ನೂ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…