ಮಾಸ್ಕೋ : ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಂದ್ರನ ತನ್ನ ನಿಗದಿತ ಪೂರ್ವ-ಲ್ಯಾಂಡಿಂಗ್ ಕಕ್ಷೆಯನ್ನ ಪ್ರವೇಶಿಸುವಲ್ಲಿ ವಿಫಲವಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಲೂನಾ-25 ಶನಿವಾರ ಕಕ್ಷೆ ಪ್ರವೇಶಿಸಬೇಕಿತ್ತು. ಆದರೆ ತುರ್ತು ಪರಿಸ್ಥಿತಿಗಳಿಂದಾಗಿ ಪೂರ್ವ ಲ್ಯಾಂಡಿಂಗ್ ಕಕ್ಷೆ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ನಿಗಮ ರೋಸ್ಕೋಸ್ಮಾಸ್ ತಿಳಿಸಿದೆ. ಈ ಬಗ್ಗೆ ರಷ್ಯಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ತಂಡ ಪರಿಶೀಲನೆ ಮಾಡುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದೆ ಎಂದು ಹೇಳಿದೆ.
ಆಗಸ್ಟ್ 10 ರಂದು ರಷ್ಯಾ ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ದ್ರುವದಲ್ಲಿ ಇಳಿಯಲು ನಿರ್ಧರಿಸಲಾಗಿತ್ತು. ಆದರೆ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ಲೂನಾ-25 ವಿಫಲವಾಗಿದೆ ಎಂದು ಹೇಳಲಾಗಿದೆ. ಸದ್ಯ ಯೋಜನೆ ನಿಂತಿದೆಯೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.
ಇನ್ನೂ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…