BREAKING NEWS

ಪೂರ್ವ ಉಕ್ರೇನ್‌ ನಗರದ ಪಿಜ್ಜಾ ರೆಸ್ಟೋರೆಂಟ್‌ಗೆ ಅಪ್ಪಳಿಸಿದ ರಷ್ಯಾದ ಕ್ಷಿಪಣಿ: 9 ಮಂದಿ ಸಾವು

ಕೀವ್: ಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಕರ್ತರು ನಾಶವಾದ ಕಟ್ಟಡದ ಅವಶೇಷಗಳಲ್ಲಿ ಹುಡುಕಾಟ ಮುಂದುವರೆಸಿದ್ದಾರೆ.

ಮಂಗಳವಾರ ಸಂಜೆ ಕ್ರಮಾಟೋರ್ಸ್ಕ್ ನಗರದ ರಿಯಾ ಪಿಜ್ಜಾ ರೆಸ್ಟೋರೆಂಟ್ ಮೇಲೆ ನಡೆಸಿದ ದಾಳಿಯಲ್ಲಿ 56 ಜನರು ಗಾಯಗೊಂಡಿದ್ದಾರೆ. 16 ತಿಂಗಳ ಹಳೆಯ ಯುದ್ಧದಲ್ಲಿ ರಷ್ಯಾ ಒಂದೇ ಒಂದು ತಂತ್ರವನ್ನು ಹೆಚ್ಚಾಗಿ ಬಳಸಿದೆ ಎಂದು ಉಕ್ರೇನ್ ಆಂತರಿಕ ವ್ಯವಹಾರಗಳ ಸಚಿವಾಲಯ ಇತ್ತೀಚಿನ ಬಾಂಬ್ ದಾಳಿಯನ್ನು ಉಲ್ಲೇಖಿಸಿ ತಿಳಿಸಿದೆ.

ದಾಳಿಯ ಪರಿಣಾಮವಾಗಿ 14 ವರ್ಷ ವಯಸ್ಸಿನ ಇಬ್ಬರು ಸಹೋದರಿಯರು ಸಾವಿಗೀಡಾಗಿದ್ದಾರೆ ಎಂದು ಕ್ರಾಮಾಟೋರ್ಸ್ಕ್ ಸಿಟಿ ಕೌನ್ಸಿಲ್‌ನ ಶೈಕ್ಷಣಿಕ ಇಲಾಖೆ ತಿಳಿಸಿದೆ. ರಷ್ಯಾದ ಕ್ಷಿಪಣಿಗಳು ಇಬ್ಬರು ಯುವತಿಯರ ಹೃದಯ ಬಡಿತವನ್ನು ನಿಲ್ಲಿಸಿದವು ಎಂದು ಟೆಲಿಗ್ರಾಮ್ ಪೋಸ್ಟ್‌ನಲ್ಲಿ ಅದು ಹೇಳಿದೆ.

ಮತ್ತೊಂದು ಮೃತ ಮಗುವಿನ ವಯಸ್ಸು 17 ವರ್ಷವಾಗಿದೆ ಎಂದು ಪ್ರಾಸಿಕ್ಯೂಟರ್ ಜನರಲ್ ಆಂಡ್ರಿ ಕೊಸ್ಟಿನ್ ತಿಳಿಸಿದ್ದಾರೆ|

ರಷ್ಯಾ ನಡೆಸಿರುವ ದಾಳಿಯಲ್ಲಿ S-300 ಕ್ಷಿಪಣಿಗಳನ್ನು ಬಳಸಲಾಗಿದೆ. ದಾಳಿಯಲ್ಲಿ 18 ಬಹುಮಹಡಿ ಕಟ್ಟಡಗಳು, 65 ಮನೆಗಳು, ಐದು ಶಾಲೆಗಳು, ಎರಡು ಶಿಶುವಿಹಾರಗಳು, ಶಾಪಿಂಗ್ ಸೆಂಟರ್, ಆಡಳಿತ ಕಟ್ಟಡ ಮತ್ತು ಮನರಂಜನಾ ಕಟ್ಟಡವನ್ನು ಹಾನಿಗೊಳಿಸಲಾಗಿದೆ ಎಂದು ಪ್ರಾದೇಶಿಕ ಗವರ್ನರ್ ಪಾವ್ಲೊ ಕಿರಿಲೆಂಕೊ ಹೇಳಿದ್ದಾರೆ.

ಕ್ರಾಮಾಟೋರ್ಸ್ಕ್ ಒಂದು ಮುಂಚೂಣಿ ನಗರವಾಗಿದ್ದು, ಅದು ಉಕ್ರೇನ್ ಸೇನೆಯ ಪ್ರಾದೇಶಿಕ ಪ್ರಧಾನ ಕಛೇರಿಯನ್ನು ಹೊಂದಿದೆ.
ಪಿಜ್ಜಾ ರೆಸ್ಟೊರೆಂಟ್‌ಗೆ ಪತ್ರಕರ್ತರು, ಸಹಾಯ ಕಾರ್ಯಕರ್ತರು ಮತ್ತು ಸೈನಿಕರು ಮತ್ತು ಸ್ಥಳೀಯರು ಹೆಚ್ಚಾಗಿ ಬರುತ್ತಿದ್ದರು. ಇದು ಡೊನೆಟ್ಸ್ಕ್‌ನಲ್ಲಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ರಷ್ಯಾ ಸ್ವಾಧೀನಪಡಿಸಿಕೊಳ್ಳುವುದಾಗಿ ಹೇಳಿಕೊಂಡ ನಾಲ್ಕು ಉಕ್ರೇನ್ ಪ್ರಾಂತ್ಯಗಳಲ್ಲಿ ಒಂದಾಗಿದೆ. ಆದರೆ, ಸಂಪೂರ್ಣವಾಗಿ ರಷ್ಯಾದ ವಶದಲ್ಲಿಲ್ಲ.

ರಷ್ಯಾ 2015 ರಿಂದ ಕ್ರಿಮಿಯಾವನ್ನು ಆಕ್ರಮಿಸಿಕೊಂಡಿದೆ. ರಷ್ಯಾ ಭಾಗಶಃ ಆಕ್ರಮಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ಉಕ್ರೇನ್‌ನ ಹಿಡಿತದಲ್ಲಿರುವ ಭಾಗಗಳು ವಿಶೇಷವಾಗಿ ರಷ್ಯಾದ ಬಾಂಬ್ ದಾಳಿಯಿಂದ ತೀವ್ರವಾಗಿ ಹಾನಿಗೊಳಗಾಗಿವೆ ಮತ್ತು ಯುದ್ಧವನ್ನು ಪರಿಹರಿಸುವಲ್ಲಿ ಪ್ರಮುಖ ತಡೆಗೋಡೆಯಾಗಿದೆ.

andolanait

Recent Posts

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

52 mins ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

1 hour ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

1 hour ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

2 hours ago