BREAKING NEWS

ಪೂರ್ವ ಉಕ್ರೇನ್‌ ನಗರದ ಪಿಜ್ಜಾ ರೆಸ್ಟೋರೆಂಟ್‌ಗೆ ಅಪ್ಪಳಿಸಿದ ರಷ್ಯಾದ ಕ್ಷಿಪಣಿ: 9 ಮಂದಿ ಸಾವು

ಕೀವ್: ಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಕರ್ತರು ನಾಶವಾದ ಕಟ್ಟಡದ ಅವಶೇಷಗಳಲ್ಲಿ ಹುಡುಕಾಟ ಮುಂದುವರೆಸಿದ್ದಾರೆ.

ಮಂಗಳವಾರ ಸಂಜೆ ಕ್ರಮಾಟೋರ್ಸ್ಕ್ ನಗರದ ರಿಯಾ ಪಿಜ್ಜಾ ರೆಸ್ಟೋರೆಂಟ್ ಮೇಲೆ ನಡೆಸಿದ ದಾಳಿಯಲ್ಲಿ 56 ಜನರು ಗಾಯಗೊಂಡಿದ್ದಾರೆ. 16 ತಿಂಗಳ ಹಳೆಯ ಯುದ್ಧದಲ್ಲಿ ರಷ್ಯಾ ಒಂದೇ ಒಂದು ತಂತ್ರವನ್ನು ಹೆಚ್ಚಾಗಿ ಬಳಸಿದೆ ಎಂದು ಉಕ್ರೇನ್ ಆಂತರಿಕ ವ್ಯವಹಾರಗಳ ಸಚಿವಾಲಯ ಇತ್ತೀಚಿನ ಬಾಂಬ್ ದಾಳಿಯನ್ನು ಉಲ್ಲೇಖಿಸಿ ತಿಳಿಸಿದೆ.

ದಾಳಿಯ ಪರಿಣಾಮವಾಗಿ 14 ವರ್ಷ ವಯಸ್ಸಿನ ಇಬ್ಬರು ಸಹೋದರಿಯರು ಸಾವಿಗೀಡಾಗಿದ್ದಾರೆ ಎಂದು ಕ್ರಾಮಾಟೋರ್ಸ್ಕ್ ಸಿಟಿ ಕೌನ್ಸಿಲ್‌ನ ಶೈಕ್ಷಣಿಕ ಇಲಾಖೆ ತಿಳಿಸಿದೆ. ರಷ್ಯಾದ ಕ್ಷಿಪಣಿಗಳು ಇಬ್ಬರು ಯುವತಿಯರ ಹೃದಯ ಬಡಿತವನ್ನು ನಿಲ್ಲಿಸಿದವು ಎಂದು ಟೆಲಿಗ್ರಾಮ್ ಪೋಸ್ಟ್‌ನಲ್ಲಿ ಅದು ಹೇಳಿದೆ.

ಮತ್ತೊಂದು ಮೃತ ಮಗುವಿನ ವಯಸ್ಸು 17 ವರ್ಷವಾಗಿದೆ ಎಂದು ಪ್ರಾಸಿಕ್ಯೂಟರ್ ಜನರಲ್ ಆಂಡ್ರಿ ಕೊಸ್ಟಿನ್ ತಿಳಿಸಿದ್ದಾರೆ|

ರಷ್ಯಾ ನಡೆಸಿರುವ ದಾಳಿಯಲ್ಲಿ S-300 ಕ್ಷಿಪಣಿಗಳನ್ನು ಬಳಸಲಾಗಿದೆ. ದಾಳಿಯಲ್ಲಿ 18 ಬಹುಮಹಡಿ ಕಟ್ಟಡಗಳು, 65 ಮನೆಗಳು, ಐದು ಶಾಲೆಗಳು, ಎರಡು ಶಿಶುವಿಹಾರಗಳು, ಶಾಪಿಂಗ್ ಸೆಂಟರ್, ಆಡಳಿತ ಕಟ್ಟಡ ಮತ್ತು ಮನರಂಜನಾ ಕಟ್ಟಡವನ್ನು ಹಾನಿಗೊಳಿಸಲಾಗಿದೆ ಎಂದು ಪ್ರಾದೇಶಿಕ ಗವರ್ನರ್ ಪಾವ್ಲೊ ಕಿರಿಲೆಂಕೊ ಹೇಳಿದ್ದಾರೆ.

ಕ್ರಾಮಾಟೋರ್ಸ್ಕ್ ಒಂದು ಮುಂಚೂಣಿ ನಗರವಾಗಿದ್ದು, ಅದು ಉಕ್ರೇನ್ ಸೇನೆಯ ಪ್ರಾದೇಶಿಕ ಪ್ರಧಾನ ಕಛೇರಿಯನ್ನು ಹೊಂದಿದೆ.
ಪಿಜ್ಜಾ ರೆಸ್ಟೊರೆಂಟ್‌ಗೆ ಪತ್ರಕರ್ತರು, ಸಹಾಯ ಕಾರ್ಯಕರ್ತರು ಮತ್ತು ಸೈನಿಕರು ಮತ್ತು ಸ್ಥಳೀಯರು ಹೆಚ್ಚಾಗಿ ಬರುತ್ತಿದ್ದರು. ಇದು ಡೊನೆಟ್ಸ್ಕ್‌ನಲ್ಲಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ರಷ್ಯಾ ಸ್ವಾಧೀನಪಡಿಸಿಕೊಳ್ಳುವುದಾಗಿ ಹೇಳಿಕೊಂಡ ನಾಲ್ಕು ಉಕ್ರೇನ್ ಪ್ರಾಂತ್ಯಗಳಲ್ಲಿ ಒಂದಾಗಿದೆ. ಆದರೆ, ಸಂಪೂರ್ಣವಾಗಿ ರಷ್ಯಾದ ವಶದಲ್ಲಿಲ್ಲ.

ರಷ್ಯಾ 2015 ರಿಂದ ಕ್ರಿಮಿಯಾವನ್ನು ಆಕ್ರಮಿಸಿಕೊಂಡಿದೆ. ರಷ್ಯಾ ಭಾಗಶಃ ಆಕ್ರಮಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ಉಕ್ರೇನ್‌ನ ಹಿಡಿತದಲ್ಲಿರುವ ಭಾಗಗಳು ವಿಶೇಷವಾಗಿ ರಷ್ಯಾದ ಬಾಂಬ್ ದಾಳಿಯಿಂದ ತೀವ್ರವಾಗಿ ಹಾನಿಗೊಳಗಾಗಿವೆ ಮತ್ತು ಯುದ್ಧವನ್ನು ಪರಿಹರಿಸುವಲ್ಲಿ ಪ್ರಮುಖ ತಡೆಗೋಡೆಯಾಗಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago