BREAKING NEWS

ತಮಿಳುನಾಡಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಟೊಮೆಟೊ ಮಾರಾಟ

ಚೆನ್ನೈ : ಟೊಮೆಟೊ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಮಿಳುನಾಡು ಸರ್ಕಾರ, ಪ್ರತಿ ಕೆ.ಜಿ.ಗೆ – 60 ರಂತೆ ನಗರದ 82 ನ್ಯಾಯಬೆಲೆ ಅಂಗಡಿಗಳಲ್ಲಿ ಇಂದಿನಿಂದ ಮಾರಾಟ ಆರಂಭಿಸಿದೆ.

ಅಗತ್ಯಬಿದ್ದರೆ ಈ ಕ್ರಮವನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಆರ್.ಪರಿಯಕರುಪ್ಪನ್ ತಿಳಿಸಿದ್ದಾರೆ.

ಸದ್ಯದ ಕ್ರಮವು ಚೆನ್ನೈ, ಕೊಯಮತ್ತೂರು, ಸೇಲಂ, ಈರೋಡ್ ಮತ್ತು ವೆಲ್ಲೂರ್‌ನಲ್ಲಿರುವ ‘ತಾಜಾ ಕೃಷಿ ಮಳಿಗೆ’ಗಳಲ್ಲಿಯೂ ಟೊಮೆಟೊ – 60ಕ್ಕೆ ಲಭ್ಯವಾಗುವಂತೆ ಮಾಡಿದೆ ಎಂದೂ ಅವರು ಹೇಳಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಟೊಮೆಟೊ ಮಾರಾಟ ಮಾಡುವ ತೀರ್ಮಾನವನ್ನು ಸೋಮವಾರ ಸಂಜೆ ನಡೆದ ಸಭೆಯಲ್ಲಿ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಟೊಮೆಟೊ ಬೆಳೆಯುವ ಪ್ರದೇಶಗಳನ್ನು ಗುರುತಿಸಿ, ರೈತರು ರಾಜ್ಯದ ಗ್ರಾಹಕರಿಗೆ ಯಾವುದೇ ತಡೆ ಇಲ್ಲದೆ ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಸಹಕಾರ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ನೆರೆ ರಾಜ್ಯಗಳಿಂದ ಟೊಮೆಟೊ ಬೆಳೆ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣ. ಚೆನ್ನೈನ ಪಕ್ಕದ ನಗರ ಕೊಯಂಬೆದು ವೋಲ್‌ಸೇಲ್ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಟೊಮೆಟೊ ಬೆಲೆ 110 ರೂ ಆಗಿದೆ. ಕೆಲ ಪ್ರದೇಶಗಳಲ್ಲಿ ಇದಕ್ಕಿಂತಲೂ ಹೆಚ್ಚಾಗಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

lokesh

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

38 mins ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

3 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

3 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

3 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

3 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

5 hours ago