BREAKING NEWS

ತಮಿಳುನಾಡಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಟೊಮೆಟೊ ಮಾರಾಟ

ಚೆನ್ನೈ : ಟೊಮೆಟೊ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಮಿಳುನಾಡು ಸರ್ಕಾರ, ಪ್ರತಿ ಕೆ.ಜಿ.ಗೆ – 60 ರಂತೆ ನಗರದ 82 ನ್ಯಾಯಬೆಲೆ ಅಂಗಡಿಗಳಲ್ಲಿ ಇಂದಿನಿಂದ ಮಾರಾಟ ಆರಂಭಿಸಿದೆ.

ಅಗತ್ಯಬಿದ್ದರೆ ಈ ಕ್ರಮವನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಆರ್.ಪರಿಯಕರುಪ್ಪನ್ ತಿಳಿಸಿದ್ದಾರೆ.

ಸದ್ಯದ ಕ್ರಮವು ಚೆನ್ನೈ, ಕೊಯಮತ್ತೂರು, ಸೇಲಂ, ಈರೋಡ್ ಮತ್ತು ವೆಲ್ಲೂರ್‌ನಲ್ಲಿರುವ ‘ತಾಜಾ ಕೃಷಿ ಮಳಿಗೆ’ಗಳಲ್ಲಿಯೂ ಟೊಮೆಟೊ – 60ಕ್ಕೆ ಲಭ್ಯವಾಗುವಂತೆ ಮಾಡಿದೆ ಎಂದೂ ಅವರು ಹೇಳಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಟೊಮೆಟೊ ಮಾರಾಟ ಮಾಡುವ ತೀರ್ಮಾನವನ್ನು ಸೋಮವಾರ ಸಂಜೆ ನಡೆದ ಸಭೆಯಲ್ಲಿ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಟೊಮೆಟೊ ಬೆಳೆಯುವ ಪ್ರದೇಶಗಳನ್ನು ಗುರುತಿಸಿ, ರೈತರು ರಾಜ್ಯದ ಗ್ರಾಹಕರಿಗೆ ಯಾವುದೇ ತಡೆ ಇಲ್ಲದೆ ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಸಹಕಾರ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ನೆರೆ ರಾಜ್ಯಗಳಿಂದ ಟೊಮೆಟೊ ಬೆಳೆ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣ. ಚೆನ್ನೈನ ಪಕ್ಕದ ನಗರ ಕೊಯಂಬೆದು ವೋಲ್‌ಸೇಲ್ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಟೊಮೆಟೊ ಬೆಲೆ 110 ರೂ ಆಗಿದೆ. ಕೆಲ ಪ್ರದೇಶಗಳಲ್ಲಿ ಇದಕ್ಕಿಂತಲೂ ಹೆಚ್ಚಾಗಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

58 mins ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

15 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

16 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

17 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

17 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

18 hours ago