BREAKING NEWS

ತಮಿಳುನಾಡಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಟೊಮೆಟೊ ಮಾರಾಟ

ಚೆನ್ನೈ : ಟೊಮೆಟೊ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಮಿಳುನಾಡು ಸರ್ಕಾರ, ಪ್ರತಿ ಕೆ.ಜಿ.ಗೆ – 60 ರಂತೆ ನಗರದ 82 ನ್ಯಾಯಬೆಲೆ ಅಂಗಡಿಗಳಲ್ಲಿ ಇಂದಿನಿಂದ ಮಾರಾಟ ಆರಂಭಿಸಿದೆ.

ಅಗತ್ಯಬಿದ್ದರೆ ಈ ಕ್ರಮವನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಆರ್.ಪರಿಯಕರುಪ್ಪನ್ ತಿಳಿಸಿದ್ದಾರೆ.

ಸದ್ಯದ ಕ್ರಮವು ಚೆನ್ನೈ, ಕೊಯಮತ್ತೂರು, ಸೇಲಂ, ಈರೋಡ್ ಮತ್ತು ವೆಲ್ಲೂರ್‌ನಲ್ಲಿರುವ ‘ತಾಜಾ ಕೃಷಿ ಮಳಿಗೆ’ಗಳಲ್ಲಿಯೂ ಟೊಮೆಟೊ – 60ಕ್ಕೆ ಲಭ್ಯವಾಗುವಂತೆ ಮಾಡಿದೆ ಎಂದೂ ಅವರು ಹೇಳಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಟೊಮೆಟೊ ಮಾರಾಟ ಮಾಡುವ ತೀರ್ಮಾನವನ್ನು ಸೋಮವಾರ ಸಂಜೆ ನಡೆದ ಸಭೆಯಲ್ಲಿ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಟೊಮೆಟೊ ಬೆಳೆಯುವ ಪ್ರದೇಶಗಳನ್ನು ಗುರುತಿಸಿ, ರೈತರು ರಾಜ್ಯದ ಗ್ರಾಹಕರಿಗೆ ಯಾವುದೇ ತಡೆ ಇಲ್ಲದೆ ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಸಹಕಾರ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ನೆರೆ ರಾಜ್ಯಗಳಿಂದ ಟೊಮೆಟೊ ಬೆಳೆ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣ. ಚೆನ್ನೈನ ಪಕ್ಕದ ನಗರ ಕೊಯಂಬೆದು ವೋಲ್‌ಸೇಲ್ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಟೊಮೆಟೊ ಬೆಲೆ 110 ರೂ ಆಗಿದೆ. ಕೆಲ ಪ್ರದೇಶಗಳಲ್ಲಿ ಇದಕ್ಕಿಂತಲೂ ಹೆಚ್ಚಾಗಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago