BREAKING NEWS

ಸಲಿಂಗ ವಿವಾಹ : ಅರ್ಜಿ ವಿಚಾರಣೆಗೆ ಕೇಂದ್ರದ ವಿರೋಧ

ನವದೆಹಲಿ : ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿರುವ ಅರ್ಜಿಗಳು ನಗರಗಳಲ್ಲಿ ನೆಲೆಸಿರುವ ಒಂದು ವರ್ಗದ ಜನರ ಮನಃಸ್ಥಿತಿಯಾಗಿದೆ. ಮದುವೆಗೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಹಾಗಾಗಿ, ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೇಳಿದೆ. 

ಈ ಅರ್ಜಿಗಳು ವಿಚಾರಣೆಗೇ ಅರ್ಹವಲ್ಲ. ಸಾಮಾಜಿಕ ಸ್ವೀಕೃತಿಯನ್ನು ಪಡೆದುಕೊಳ್ಳುವ ಉದ್ದೇಶದಿಂದ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಕೇಂದ್ರವು ವಾದಿಸಿದೆ. 

‘ಗ್ರಾಮೀಣ, ಅರೆ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರ ನಿಲುವುಗಳು, ಧಾರ್ಮಿಕ ನಿಲುವುಗಳು, ವೈಯಕ್ತಿಕ ಕಾನೂನುಗಳು, ಮದುವೆಗೆ ಸಂಬಂಧಿಸಿದ ಪದ್ಧತಿಗಳು, ಇತರ ಕಾನೂನುಗಳ ಮೇಲೆ ಈ ಕಾನೂನು (ಸಲಿಂಗ ವಿವಾಹ ಮಾನ್ಯತೆ) ಬೀರಬಹುದಾದ ಪರಿಣಾಮಗಳ ಕುರಿತು ಶಾಸಕಾಂಗವು ವಿಸ್ತಾರ ನೆಲೆಯಲ್ಲಿ ಚಿಂತಿಸಿ, ಕ್ರಮ ಕೈಗೊಳ್ಳಲಿದೆ’ ಎಂದು ಕೇಂದ್ರ ಹೇಳಿದೆ. ಸರ್ಕಾರವು ಸಲ್ಲಿಸಿದ ಪ್ರಮಾಣಪತ್ರದಲ್ಲಿ ಇದನ್ನು ವಿವರಿಸಲಾಗಿದೆ. 

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ವಿಚಾರಣೆಯು ಮಂಗಳವಾರವೂ ಮುಂದುವರಿಯಲಿದೆ. 

lokesh

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

36 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago