ನವದೆಹಲಿ : ಎಲ್ ಜಿಬಿಟಿ ಸಮುದಾಯದ ವ್ಯಕ್ತಿಗಳು (ಸಲಿಂಗಕಾಮಿಗಳು, ದ್ವಿಲಿಂಗಿ, ತೃತೀಯಲಿಂಗಿಗಳು) ಸೇರಿದಂತೆ ಎಲ್ಲಾ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವ ಸಾಮರ್ಥ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಹಾದಿಯನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಸಂವಿಧಾನ ವಿಧಿ 21 ರ ಅಡಿಯಲ್ಲಿ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕಿನ ಮೂಲಕ್ಕೆ ಹೋಗುತ್ತದೆ. ಒಂದು ಕೂಡಿಕೆ ಮಾಡಿಕೊಳ್ಳುವ ಹಕ್ಕನ್ನು ಸಹ ಆರ್ಟಿಕಲ್ 19(1)(ಇ) ನಲ್ಲಿ ಆಧಾರಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.
ಎಲ್ ಜಿಬಿಟಿ ಸಮುದಾಯದ ಸಂಬಂಧಗಳಿಗೆ, ಅಂತಹ ಒಕ್ಕೂಟಗಳಿಗೆ ಮನ್ನಣೆಯ ಅಗತ್ಯವಿದೆ. ಅವರಿಗೆ ಮೂಲಭೂತ ಸೌಲಭ್ಯಗಳು, ಅಗತ್ಯ ಸೇವೆಗಳನ್ನು ನಿರಾಕರಿಸುವಂತಿಲ್ಲ. ಈ ಸಮುದಾಯದವರ ಸ್ವಾತಂತ್ರ್ಯವನ್ನು ಪರೋಕ್ಷವಾಗಿ ಕೂಡ ಉಲ್ಲಂಘಿಸಲು ಸಾಧ್ಯವಿಲ್ಲ, ಅವರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು ಎಂದರು.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪನ್ನು ಪ್ರಕಟಿಸಿದೆ.
ಸಲಿಂಗ ಜೋಡಿಗಳ ವಿರುದ್ಧ ಎಫ್ಐಆರ್ ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿಗಳು ಇದೇ ಸಂದರ್ಭದಲ್ಲಿ ಪೊಲೀಸರಿಗೆ ಸೂಚಿಸಿದರು, ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಲಿಂಗ ಸಮುದಾಯದ ವಿರುದ್ಧ ತಾರತಮ್ಯ ಮಾಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…
ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…