ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಅವರು ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಯನ್ನು ಸಮರ್ಥಿಸಿದ ಡಿಎಂಕೆ ಸಂಸದ ಎ. ರಾಜಾ ಅವರು ‘ಸನಾತನ ಧರ್ಮ’ವನ್ನು ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕವನ್ನು ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.
‘ಸನಾತನ ಧರ್ಮ’ದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಮೃದು ಧೋರಣೆಯನ್ನು ಹೊಂದಿದ್ದವು ಎಂದು ಹೇಳಿದ ರಾಜಾ, “ಸನಾತನ ಮತ್ತು ವಿಶ್ವಕರ್ಮ ಯೋಜನೆ ಬೇರೆ ಬೇರೆ ಅಲ್ಲ, ಎರಡೂ ಒಂದೇ. ಸನಾತನವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಪ್ರತಿಪಾದಿಸುವಾಗ ಉದಯನಿಧಿ ಸ್ಟಾಲಿನ್ ಮೃದು ಧೋರಣೆ ತೋರಿದ್ದರು” ಎಂದು ಹೇಳಿದರು.
“ಆದರೆ ಈ ರೋಗಗಳು ಸಾಮಾಜಿಕ ಕಳಂಕವನ್ನು ಹೊಂದಿಲ್ಲ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸನಾತನವನ್ನು ಹೆಚ್ಐವಿ ಹಾಗೂ ಕುಷ್ಠರೋಗವನ್ನು ಅಸಹ್ಯಕರವಾಗಿ ನೋಡುವ ಹಾಗೆ ನೋಡಬೇಕು” ಎಂದು ರಾಜಾ ಹೇಳಿದ್ದಾರೆ.
ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ನೀವು ಯಾರನ್ನು ಬೇಕಾದರೂ ಕರೆ ತನ್ನಿ ಎಂದು ಸವಾಲು ಹಾಕಿದ ರಾಜಾ, ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ನಾನು ದೆಹಲಿಗೆ ಚರ್ಚೆಗೆ ಬರುತ್ತೇನೆ ಎಂದು ಹೇಳಿದ್ದಾರೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…