ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಅವರು ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಯನ್ನು ಸಮರ್ಥಿಸಿದ ಡಿಎಂಕೆ ಸಂಸದ ಎ. ರಾಜಾ ಅವರು ‘ಸನಾತನ ಧರ್ಮ’ವನ್ನು ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕವನ್ನು ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.
‘ಸನಾತನ ಧರ್ಮ’ದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಮೃದು ಧೋರಣೆಯನ್ನು ಹೊಂದಿದ್ದವು ಎಂದು ಹೇಳಿದ ರಾಜಾ, “ಸನಾತನ ಮತ್ತು ವಿಶ್ವಕರ್ಮ ಯೋಜನೆ ಬೇರೆ ಬೇರೆ ಅಲ್ಲ, ಎರಡೂ ಒಂದೇ. ಸನಾತನವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಪ್ರತಿಪಾದಿಸುವಾಗ ಉದಯನಿಧಿ ಸ್ಟಾಲಿನ್ ಮೃದು ಧೋರಣೆ ತೋರಿದ್ದರು” ಎಂದು ಹೇಳಿದರು.
“ಆದರೆ ಈ ರೋಗಗಳು ಸಾಮಾಜಿಕ ಕಳಂಕವನ್ನು ಹೊಂದಿಲ್ಲ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸನಾತನವನ್ನು ಹೆಚ್ಐವಿ ಹಾಗೂ ಕುಷ್ಠರೋಗವನ್ನು ಅಸಹ್ಯಕರವಾಗಿ ನೋಡುವ ಹಾಗೆ ನೋಡಬೇಕು” ಎಂದು ರಾಜಾ ಹೇಳಿದ್ದಾರೆ.
ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ನೀವು ಯಾರನ್ನು ಬೇಕಾದರೂ ಕರೆ ತನ್ನಿ ಎಂದು ಸವಾಲು ಹಾಕಿದ ರಾಜಾ, ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ನಾನು ದೆಹಲಿಗೆ ಚರ್ಚೆಗೆ ಬರುತ್ತೇನೆ ಎಂದು ಹೇಳಿದ್ದಾರೆ.
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…