BREAKING NEWS

ಸನಾತನ ಧರ್ಮವನ್ನು ಹೆಚ್‌ಐವಿ, ಕುಷ್ಠರೋಗಕ್ಕೆ ಹೋಲಿಸಬೇಕು: ಡಿಎಂಕೆ ಸಂಸದ ಎ.ರಾಜಾ

ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಅವರು ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಯನ್ನು ಸಮರ್ಥಿಸಿದ ಡಿಎಂಕೆ ಸಂಸದ ಎ. ರಾಜಾ ಅವರು ‘ಸನಾತನ ಧರ್ಮ’ವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕವನ್ನು ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.

‘ಸನಾತನ ಧರ್ಮ’ದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಮೃದು ಧೋರಣೆಯನ್ನು ಹೊಂದಿದ್ದವು ಎಂದು ಹೇಳಿದ ರಾಜಾ, “ಸನಾತನ ಮತ್ತು ವಿಶ್ವಕರ್ಮ ಯೋಜನೆ ಬೇರೆ ಬೇರೆ ಅಲ್ಲ, ಎರಡೂ ಒಂದೇ. ಸನಾತನವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಪ್ರತಿಪಾದಿಸುವಾಗ ಉದಯನಿಧಿ ಸ್ಟಾಲಿನ್ ಮೃದು ಧೋರಣೆ ತೋರಿದ್ದರು” ಎಂದು ಹೇಳಿದರು.

“ಆದರೆ ಈ ರೋಗಗಳು ಸಾಮಾಜಿಕ ಕಳಂಕವನ್ನು ಹೊಂದಿಲ್ಲ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸನಾತನವನ್ನು ಹೆಚ್‌ಐವಿ ಹಾಗೂ ಕುಷ್ಠರೋಗವನ್ನು ಅಸಹ್ಯಕರವಾಗಿ ನೋಡುವ ಹಾಗೆ ನೋಡಬೇಕು” ಎಂದು ರಾಜಾ ಹೇಳಿದ್ದಾರೆ.

ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ನೀವು ಯಾರನ್ನು ಬೇಕಾದರೂ ಕರೆ ತನ್ನಿ ಎಂದು ಸವಾಲು ಹಾಕಿದ ರಾಜಾ, ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ನಾನು ದೆಹಲಿಗೆ ಚರ್ಚೆಗೆ ಬರುತ್ತೇನೆ ಎಂದು ಹೇಳಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago