ಚೆನ್ನೈ : ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ ಮೂಲಕ ಬಿಜೆಪಿ ನಾಯಕರನ್ನು ತೀವ್ರವಾಗಿ ಟೀಕಿಸಿದ್ದು, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಸಾಮಾಜಿಕ ಜಾಲಾತಾಣದಲ್ಲಿ ಇವರ ಹೇಳಿಕೆ ಕುರಿತು ಅನೇಕ ಕಾಮೆಂಟ್ಗಳು ಬರತೊಡಗಿದ್ದು, ನೆಟ್ಟಿಗರು ತಮಿಳುನಾಡು ಮುಖ್ಯಮಂತ್ರಿಯ ಮಗನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ನ ಮಿತ್ರಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನ ಈ ನರಮೇಧದ ಕರೆಗೆ ಬೆಂಬಲವಾಗಿದೆ. INDIA ಒಕ್ಕೂಟಕ್ಕೆ ಒಂದು ಅವಕಾಶವನ್ನು ನೀಡಿದರೆ ಅದು ನಮ್ಮ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ವಾದಿಸಿದ್ದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…