ಮಂಡ್ಯ : ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಮಂಡ್ಯಕ್ಕೆ ಬರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ನಾನು ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿಗಳ ಪರವಾಗಿ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದೇನೆ. ನಿಮ್ಮೆಲ್ಲರನ್ನೂ ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.
ಮಂಡ್ಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಡೆಯುವ ಪ್ರಚಾರ ಸಭೆಯಲ್ಲಿ ರಮ್ಯಾ ಭಾಗಿಯಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ರಮ್ಯಾ ಚೊಚ್ಚಲ ಬಾರಿಗೆ ಸಂಸದೆಯಾಗಿದ್ದರು. ತಮಗೆ ಸಿಕ್ಕ 6 ತಿಂಗಳ ಅವಧಿಯಲ್ಲೇ ಉತ್ತಮ ಕೆಲಸಗಳಿಂದ ಸೈ ಅನಿಸಿಕೊಂಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ರಮ್ಯಾ ಸೋಲಿಗೆ ಸ್ವಪಕ್ಷೀಯರೇ ಕಾರಣವಾಗಿದ್ದರು.
ಇದೀಗ ರಮ್ಯಾ ಅವರು ಮಂಡ್ಯ ಚುನಾವಣಾ ಅಖಾಡಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ಮಂಡ್ಯದಲ್ಲಿ ಚುನಾವಣಾ ಕಾವು ಇನ್ನಷ್ಟು ಜೋರಾಗಲಿದೆ. ಇನ್ನೊಂದೆಡೆ ಬಿಜೆಪಿ ಪರ ಸಂಸದೆ ಸುಮಲತಾ ಅಂಬರೀಷ್ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…