BREAKING NEWS

ಕೊಲೆ ಆರೋಪ: ಮೈಸೂರಿನಲ್ಲಿ ನಟ ದರ್ಶನ್‌ ಬಂಧನ

ಮೈಸೂರು: ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ದರ್ಶನ್‌ ನೇತೃತ್ವದಲ್ಲಿ ಒಟ್ಟು 10 ಮಂದಿಯನ್ನು ಕೊಲೆ ಮಾಡಿದ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೆ ಮೆಸೆಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ದರ್ಶನ್‌ ಆಪ್ತರಾದ ಪವಿತ್ರಾ ಗೌಡ ಎಂಬುವವರಿಗೆ ಈ ರೇಣುಕಾಸ್ವಾಮಿ ಅವರು ಅಶ್ಲೀಲ ಮೆಸೆಜ್‌ಗಳನ್ನು ಮಾಡಿದ್ದಾರೆ ಎಂದು ತಿಳಿದು ಅವರನ್ನು ದರ್ಶನ್‌ ಆದೇಶದ ಮೇರೆಗೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪವಿತ್ರಾಗೆ ಅಶ್ಲೀಲ ಮೆಸೆಜ್‌ ಮಾಡಿದ ಎನ್ನುವ ಕಾರಣಕ್ಕೆ ರೇಣುಕಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ವೇಳೆ ತಲೆಗೆ ಅತಿ ತೂಕವಾದ ವಸ್ತುವಿನಿಂದ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿಕ ಆತನ ದೇಹವನ್ನು ರಸ್ತೆ ಬದಿಯಲ್ಲಿ ಬಿಸಾಡಿದ್ದಾರೆ. ಇನ್ನು ನಾಯಿಗಳು ಶವವನ್ನು ಕಿತ್ತು ತಿನ್ನುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಖ್ಯಾತ ಬಿಸನೆಸ್‌ಮ್ಯಾನ್‌ ಮಗ ವಿನಯ್‌ ಅವರ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆಯಾಗಿದ್ದು, ಹಲ್ಲೆದ ಮಾಡಿದವರ ಪೈಕಿ ಪ್ರಮುಖ ನಾಲ್ವರು ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ನಟ ದರ್ಶನ್‌ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂನಲ್ಲಿ ಇಂದು ಬೆಳಿಗ್ಗೆ 8.30 ಸಮಯದಲ್ಲಿ ವಿಜಯನಗರ ಪೊಲೀಸ್‌ ಎಸಿಪಿ ಚಂದನ್‌ ನೇತೃತ್ವದಲ್ಲಿ ಬಂಧಿಸಲಾಗಿದೆ.

ಮೈಸೂರಿನಿಂದ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ದರ್ಶನ್‌ ಅವರನ್ನು ರವಾನಿಸಲಾಗಿದೆ._

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

11 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

17 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

21 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

26 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

32 mins ago