ಭೋಪಾಲ್ : ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಸೋಮವಾರ ಮೃತಪಟ್ಟಿದೆ. ಮೃತ ಚೀತಾ ‘ಸಾಶಾ’ ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ ಚೀತಾಗಳು ಆರೋಗ್ಯವಾಗಿವೆ ಎಂದು ಕುನೊ ರಾಷ್ಟ್ರೀಯ ಅಭಯಾರಣ್ಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದಲ್ಲಿ ಚೀತಾ ಸಂತತಿ ಅವಸಾನ ಕಂಡಿದ್ದವು. ದೇಶದಲ್ಲಿ ಮತ್ತೆ ಚೀತಾ ಸಂತತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಚೀತಾಗಳನ್ನು ಮರುಪರಿಚಯಿಸುವ ಕಾರ್ಯಕ್ರಮವನ್ನು ರೂಪಿಸಿತ್ತು. ಅದರಂತೆ ನಮೀಬಿಯಾದಿಂದ ಒಟ್ಟು 8 ಚೀತಾಗಳನ್ನು ತಂದು ಮಧ್ಯಪ್ರದೇಶದ ಕುನೊ ನ್ಯಾಷನಲ್ ಪಾರ್ಕ್ಗೆ ಬಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಸೆಪ್ಟೆಂಬರ್ನಲ್ಲಿ ಈ ಚೀತಾಗಳನ್ನು ಅರಣ್ಯಕ್ಕೆ ಸೇರ್ಪಡೆ ಮಾಡಲಾಗಿತ್ತು.
ಸಾಶಾ ಚೀತಾದ ದೈನಂದಿನ ನಿಗಾವಣೆ ಪರೀಕ್ಷೆ ಹಾಗೂ ವೈದ್ಯಕೀಯ ತಪಾಸಣೆ ವೇಳೆ ಅದರಲ್ಲಿ ಆಯಾಸ ಹಾಗೂ ಬಲಹೀನತೆ ಕಂಡುಬಂದಿತ್ತು. ಆಕೆಯಲ್ಲಿ ನಿರ್ಜಲೀಕರಣ ಉಂಟಾಗಿದ್ದು, ಮೂತ್ರಪಿಂಡ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ರಕ್ತ ಪರೀಕ್ಷೆ ನಡೆಸಿದಾಗ ಅದರ ಕ್ರಿಯಾಟಿನ್ ಮಟ್ಟಗಳು ಬಹಳ ಅಧಿಕವಾಗಿದ್ದು, ಮೂತ್ರಪಿಂಡದಲ್ಲಿನ ಸೋಂಕನ್ನು ದೃಢಪಡಿಸಿತ್ತು. ಉದ್ಯಾನದಲ್ಲಿರುವ ಇತರೆ ಚೀತಾಗಳು ಆರೋಗ್ಯಯುತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸೆ. 17ರಂದು ಪ್ರಧಾನಿ ಮೋದಿ ಅವರ ಜನ್ಮದಿನದಂದು ಕುನೋ ಅರಣ್ಯಕ್ಕೆ ಸೇರ್ಪಡೆಗೊಳಿಸಿದ 5 ವರ್ಷದ ಎರಡು ಚೀತಾಗಳಲ್ಲಿ ಸಾಶಾ ಕೂಡ ಒಂದು.
ಕಾಡಿಗೆ ಸೇರಿದ ಎಂಟು ಚೀತಾಗಳು : ಚೀತಾಗಳು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುವ ಬಗ್ಗೆ ಹಲವು ವನ್ಯಜೀವಿ ತಜ್ಞರು ಮೊದಲಿನಿಂದಲೂ ಅನುಮಾನ ವ್ಯಕ್ತಪಡಿಸಿದ್ದರು. ಅವುಗಳನ್ನು ಕೆಲವು ತಿಂಗಳವರೆಗೆ ಕ್ವಾರೆಂಟೈನ್ನಲ್ಲಿ ಇರಿಸಿ, ಅವುಗಳ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿತ್ತು. ನಂತರ ಅವುಗಳನ್ನು ಅರಣ್ಯಕ್ಕೆ ಬಿಡುವ ಮೂಲಕ ಅವು ಇಲ್ಲಿ ಸಹಜವಾಗಿ ಬೇಟೆಯಾಡಿ ಜೀವಿಸುವಂತೆ ಕ್ರಮ ಕೈಗೊಳ್ಳಲಾಗಿತ್ತು. ಕಳೆದ ವಾರ ಇನ್ನೂ ಎರಡು ಚೀತಾಗಳಾದ ಎಲ್ಟನ್ ಮತ್ತು ಫ್ರೆಡ್ಡಿಯನ್ನು ಮಧ್ಯಪ್ರದೇಶದ ಕಾಡಿಗೆ ಬಿಡಲಾಗಿತ್ತು. ಅದರೊಂದಿಗೆ, ನಮೀಬಿಯಾದಿಂದ ತರಲಾದ ಎಂಟು ಚಿರತೆಗಳ ಪೈಕಿ ನಾಲ್ಕನ್ನು ಶಿಯೋಪುರ್ ಜಿಲ್ಲೆಯ ಉದ್ಯಾನವನದಲ್ಲಿ ಕಾಡಿಗೆ ಬಿಡಲಾಗಿದೆ.ಫೆಬ್ರವರಿ 18ರಂದು ದಕ್ಷಿಣ ಆಫ್ರಿಕಾದಿಂದಲೂ 12 ಚೀತಾಗಳನ್ನು ತಂದು ಕುನೊ ಅಭಯಾರಣ್ಯಕ್ಕೆ ಬಿಡಲಾಗಿದೆ. ಈ ಪೈಕಿ 7 ಗಂಡು ಹಾಗೂ ಐದು ಹೆಣ್ಣು ಚೀತಾಗಳಿವೆ. ಕುನೊ ನ್ಯಾಷನಲ್ ಪಾರ್ಕ್ನಲ್ಲಿ ಸದ್ಯ ಒಟ್ಟು 19 ಚೀತಾಗಳಿವೆ.
ಸೌದಿ ರಾಜಕುಮಾರ ನೀಡಿದ್ದ ಚೀತಾ ಸಾವು : ಹೈದರಾಬಾದ್: ಸೌದಿ ರಾಜಕುಮಾರ ಬಂದಾರ್ ಬಿನ್ ಸೌದ್ ಬಿನ್ ಮೊಹಮ್ಮದ್ ಅಲ್ ಸೌದ್ ಅವರು ಸುಮಾರು ಒಂದು ದಶಕದ ಹಿಂದೆ ಉಡುಗೊರೆಯಾಗಿ ನೀಡಿದ್ದ ಚೀತಾ, ಹೈದರಾಬಾದ್ನ ನೆಹರೂ ಮೃಗಾಲಯದಲ್ಲಿ ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿತ್ತು.
15 ವರ್ಷದ ಗಂಡು ಚೀತಾ ಅಬ್ದುಲ್ಲಾಗೆ ಆಹಾರ ತಿನ್ನಲು ಕರೆದಾಗ ಅದು ಪ್ರತಿಕ್ರಿಯೆ ನೀಡಿರಲಿಲ್ಲ. ಸಾಮಾನ್ಯವಾಗಿ ಹೆಸರು ಕರೆದಾಗ ಓಡಿ ಬರುವ ಚೀತಾ ಎಲ್ಲಿಯೂ ಕಾಣಿಸಿರಲಿಲ್ಲ. ಬಳಿಕ ಒಳಗೆ ಪ್ರವೇಶಿಸಿದ ಸಿಬ್ಬಂದಿ, ಮರವೊಂದರ ಸಮೀಪದ ಚೀತಾ ಮೃತಪಟ್ಟಿರುವುದನ್ನು ಕಂಡಿದ್ದರು.
2012ರಲ್ಲಿ ಹೈದರಾಬಾದ್ ಪ್ರವಾಸದ ವೇಳೆ ಸೌದಿ ರಾಜಕುಮಾರ, ಮೃಗಾಲಯಕ್ಕೆ ಎರಡು ಜೋಡಿ ಚೀತಾ ಹಾಗೂ ಎರಡು ಜೋಡಿ ಆಫ್ರಿಕಾ ಸಿಂಹಗಳನ್ನು ಉಡುಗೊರೆಯಾಗಿ ನೀಡಿದ್ದರು. ಎಂಟು ವರ್ಷದ ಹಿಬಾ ಎಂಬ ಹೆಣ್ಣು ಚೀತಾ 2020ರಲ್ಲಿ ದೀರ್ಘ ಕಾಲದ ಅನಾರೋಗ್ಯದ ಬಳಿಕ ಮೃತಪಟ್ಟಿತ್ತು. ಈಗ ಉಳಿದಿದ್ದ ಏಕೈಕ ಚೀತಾ ಕೂಡ ಸಾವಿಗೀಡಾಗಿದೆ.
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…