BREAKING NEWS

ಸಾವರ್ಕರ್‌ ನಮ್ಮ ದೇವರು, ಅವಮಾನ ಸಹಿಸಲ್ಲ: ರಾಹುಲ್‌ಗೆ ಠಾಕ್ರೆ ಎಚ್ಚರಿಕೆ

ಮಲೆಂಗಾವ್‌: ವಿನಾಯಕ ದಾಮೋದರ ಸಾವರ್ಕರ್‌ ಅವರನ್ನು ಅವಮಾನ ಮಾಡಬೇಡಿ ಎಂದು ಶಿವಸೇನಾದ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ ಬಣ) ನಾಯಕ ಉದ್ಧವ್‌ ಠಾಕ್ರೆ ರಾಹುಲ್‌ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾವರ್ಕರ್‌ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ಅವರು ಹೇಳಿದ್ದಾರೆ.

‘ವಿ.ಡಿ ಸಾವರ್ಕರ್‌ ಅವರ ಹಿಂದುತ್ವ ನಮ್ಮ ಆದರ್ಶವಾಗಿದ್ದು, ಕಾಂಗ್ರೆಸ್‌ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು‘ ಎಂದು ಹೇಳಿದ್ದಾರೆ.

‘ಅಂಡಮಾನ್‌ನ ಸೆಲ್ಲುಲಾರ್‌ ಜೈಲಿನಲ್ಲಿ 14 ವರ್ಷಗಳ ಕಾಲ ಸಾವರ್ಕರ್ ಅವರು, ಊಹಿಸಲಾಗದ ಚಿತ್ರಹಿಂಸೆ ಅನುಭವಿಸಿದರು. ಅದು ಅವರ ತ್ಯಾಗದ ಒಂದು ರೂಪ. ನಾವು ಅವರ ಕಷ್ಟಗಳನ್ನು ಓದಲು ಮಾತ್ರ ಸಾಧ್ಯ. ಸಾವರ್ಕರ್‌ ಅವರನ್ನು ಅವಮಾನಿಸುವುದು ಸಹಿಸಲು ಸಾಧ್ಯವಿಲ್ಲ‘ ಎಂದು ಅವರು ಹೇಳಿದ್ದಾರೆ.

‘ಒಂದು ವೇಳೆ ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಅವಮಾನಿಸುವುದನ್ನು ಮುಂದುವರಿಸಿದರೆ, ವಿಪಕ್ಷಗಳ ಐಕ್ಯತೆಯಲ್ಲಿ ಬಿರುಕು ಉಂಟಾಗಬಹುದು‘ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

‘ವೀರ ಸಾವರ್ಕರ್‌ ಅವರು ನಮ್ಮ ದೇವರು. ಅವರ ಬಗ್ಗೆ ಅಗೌರವ ತೋರುವುದು ಸಹಿಸಲು ಸಾಧ್ಯವಿಲ್ಲ. ನಾವು ಹೋರಾಟಕ್ಕೆ ಸಜ್ಜಾಗಿದ್ದೇವೆ. ಆದರೆ ನಮ್ಮ ದೇವರನ್ನು ಅವಮಾನಿಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ‘ ಎಂದು ಹೇಳಿದ್ದಾರೆ.

ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ. ‘ನನ್ನ ಹೆಸರು ಸಾವರ್ಕರ್‌ ಅಲ್ಲ. ನನ್ನ ಹೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ‘ ಎಂದು ಹೇಳಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

12 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago