ಮಲೆಂಗಾವ್: ವಿನಾಯಕ ದಾಮೋದರ ಸಾವರ್ಕರ್ ಅವರನ್ನು ಅವಮಾನ ಮಾಡಬೇಡಿ ಎಂದು ಶಿವಸೇನಾದ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಉದ್ಧವ್ ಠಾಕ್ರೆ ರಾಹುಲ್ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಸಾವರ್ಕರ್ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ಅವರು ಹೇಳಿದ್ದಾರೆ.
‘ವಿ.ಡಿ ಸಾವರ್ಕರ್ ಅವರ ಹಿಂದುತ್ವ ನಮ್ಮ ಆದರ್ಶವಾಗಿದ್ದು, ಕಾಂಗ್ರೆಸ್ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು‘ ಎಂದು ಹೇಳಿದ್ದಾರೆ.
‘ಅಂಡಮಾನ್ನ ಸೆಲ್ಲುಲಾರ್ ಜೈಲಿನಲ್ಲಿ 14 ವರ್ಷಗಳ ಕಾಲ ಸಾವರ್ಕರ್ ಅವರು, ಊಹಿಸಲಾಗದ ಚಿತ್ರಹಿಂಸೆ ಅನುಭವಿಸಿದರು. ಅದು ಅವರ ತ್ಯಾಗದ ಒಂದು ರೂಪ. ನಾವು ಅವರ ಕಷ್ಟಗಳನ್ನು ಓದಲು ಮಾತ್ರ ಸಾಧ್ಯ. ಸಾವರ್ಕರ್ ಅವರನ್ನು ಅವಮಾನಿಸುವುದು ಸಹಿಸಲು ಸಾಧ್ಯವಿಲ್ಲ‘ ಎಂದು ಅವರು ಹೇಳಿದ್ದಾರೆ.
‘ಒಂದು ವೇಳೆ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು ಅವಮಾನಿಸುವುದನ್ನು ಮುಂದುವರಿಸಿದರೆ, ವಿಪಕ್ಷಗಳ ಐಕ್ಯತೆಯಲ್ಲಿ ಬಿರುಕು ಉಂಟಾಗಬಹುದು‘ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
‘ವೀರ ಸಾವರ್ಕರ್ ಅವರು ನಮ್ಮ ದೇವರು. ಅವರ ಬಗ್ಗೆ ಅಗೌರವ ತೋರುವುದು ಸಹಿಸಲು ಸಾಧ್ಯವಿಲ್ಲ. ನಾವು ಹೋರಾಟಕ್ಕೆ ಸಜ್ಜಾಗಿದ್ದೇವೆ. ಆದರೆ ನಮ್ಮ ದೇವರನ್ನು ಅವಮಾನಿಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ‘ ಎಂದು ಹೇಳಿದ್ದಾರೆ.
ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ. ‘ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ‘ ಎಂದು ಹೇಳಿದ್ದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…