BREAKING NEWS

ಸ್ಕ್ಯಾಂಡಿನೇವಿಯಾ: 6000 ವರ್ಷಗಳ ಹಿಂದಿನ ಚ್ಯೂಯಿಂಗ್​ ಗಮ್ ಪತ್ತೆ

‘ಸ್ಕ್ಯಾಂಡಿನೇವಿಯಾದಲ್ಲಿ 6,000 ವರ್ಷಗಳಷ್ಟು ಹಳೆಯದಾದ ಚ್ಯೂಯಿಂಗ್​ ಗಮ್​  (Chewing Gum) ಪತ್ತೆಯಾಗಿದೆ. ಇಷ್ಟೇ ಅಲ್ಲ ಇದನ್ನು ಜಗಿದವರ ಡಿಎನ್​ಎ (DNA)ಯನ್ನು ಕೂಡ ಇದು ಸಂರಕ್ಷಿಸಿಟ್ಟುಕೊಂಡಿದೆ. ಈ ಚ್ಯೂಯಿಂಗ್​ ಗಮ್​ ಅನ್ನು ಜಗಿದವಳು ಬೇಟೆಗಾರರ ಪುಟ್ಟ ಹುಡುಗಿ, ಈಕೆ ಕಪ್ಪು ಚರ್ಮ, ಕಂದು ಕೂದಲು ಮತ್ತು ನೀಲಿ ಕಣ್ಣುಗಳನ್ನು ಹೊಂದಿದ್ದಳು. ಈ ಚ್ಯೂಯಿಂಗ್​ಗಿಂತ ಮೊದಲು ಈಕೆ ಹಝಲ್​ನಟ್​ ಮತ್ತು ಬಾತುಕೋಳಿಯನ್ನು ತಿಂದಿದ್ದಳು’ ಎನ್ನುವ ಮಾಹಿತಿಯನ್ನು ಹೊತ್ತ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

ಡಾ. ಡೋರ್ಸಾ ಅಮೀರ್​ ಎಂಬ ಟ್ವೀಟಿಗರು ಇದನ್ನು ಟ್ವೀಟ್ ಮಾಡಿದ್ದಾರೆ. ಕೆಲವರು ಈ ವಿಷಯದ ಸತ್ಯಾಸತ್ಯತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ 5,700 ವರ್ಷ ಹಳೆಯ ಚೂಯಿಂಗ್ ಗಮ್‌ನಿಂದ ಮಾನವ ಜೀನೋಮ್ ಅನ್ನು ಮರಳಿ ಪಡೆದುದರ ಕುರಿತು ಇಂಗ್ಲಿಷ್​ ಲೇಖನವೊಂದರ ಲಿಂಕ್​ ಅನ್ನು ಈಕೆ ಈ ಟ್ವೀಟಿನಡಿ ಲಗತ್ತಿಸಿದ್ದಾರೆ. ಅನೇಕರು ಈ ವಿಷಯದ ಬಗ್ಗೆ ಕುತೂಹಲದಿಂದ ಪ್ರಶ್ನಿಸಿದ್ದಾರೆ.

ಆ ಹುಡುಗಿಯ ಚರ್ಮದ ಬಣ್ಣವನ್ನೂ ಕೂಡ ಅಷ್ಟೊಂದು ದೃಢವಾಗಿ ಪತ್ತೆ ಹಚ್ಚಿದ್ದಾರಲ್ಲ! ಎಂದು ಒಬ್ಬರು ಕೇಳಿದ್ದಾರೆ. ಬಹುಶಃ ಈಕೆ ನನ್ನ ಅಜ್ಜಿಯಾಗಿದ್ದಿರಬಹುದು ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ನಮ್ಮ ಪೂರ್ವಜರು ಬೇಟೆ ಪ್ರವೃತ್ತಿಯಿಂದ ಅವರು ಕೃಷಿಗೆ ಇಳಿದಾಗ ಅವರ ಆಹಾರ ಪದ್ಧತಿಯೂ ಬದಲಾಯಿತು. ಆದ್ದರಿಂದಲೇ ನಮಗೆ ವಿಟಮಿನ್​ ಡಿ ಕೊರತೆ ಉಂಟಾಗಿದೆ ಎನ್ನಿಸುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಹ್ ನನಗಂತೂ ಆ ಬಾಲೆ ಪುಟ್ಟ ಮತ್ಸ್ಯಕನ್ಯೆಯಂತೆ ಕಾಣುತ್ತಿದ್ದಾಳೆ ಎಂದಿದ್ದಾರೆ ಮಗದೊಬ್ಬರು.

andolanait

Recent Posts

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

11 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

21 mins ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

38 mins ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

1 hour ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

5 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

5 hours ago