BREAKING NEWS

ಸ್ಕ್ಯಾಂಡಿನೇವಿಯಾ: 6000 ವರ್ಷಗಳ ಹಿಂದಿನ ಚ್ಯೂಯಿಂಗ್​ ಗಮ್ ಪತ್ತೆ

‘ಸ್ಕ್ಯಾಂಡಿನೇವಿಯಾದಲ್ಲಿ 6,000 ವರ್ಷಗಳಷ್ಟು ಹಳೆಯದಾದ ಚ್ಯೂಯಿಂಗ್​ ಗಮ್​  (Chewing Gum) ಪತ್ತೆಯಾಗಿದೆ. ಇಷ್ಟೇ ಅಲ್ಲ ಇದನ್ನು ಜಗಿದವರ ಡಿಎನ್​ಎ (DNA)ಯನ್ನು ಕೂಡ ಇದು ಸಂರಕ್ಷಿಸಿಟ್ಟುಕೊಂಡಿದೆ. ಈ ಚ್ಯೂಯಿಂಗ್​ ಗಮ್​ ಅನ್ನು ಜಗಿದವಳು ಬೇಟೆಗಾರರ ಪುಟ್ಟ ಹುಡುಗಿ, ಈಕೆ ಕಪ್ಪು ಚರ್ಮ, ಕಂದು ಕೂದಲು ಮತ್ತು ನೀಲಿ ಕಣ್ಣುಗಳನ್ನು ಹೊಂದಿದ್ದಳು. ಈ ಚ್ಯೂಯಿಂಗ್​ಗಿಂತ ಮೊದಲು ಈಕೆ ಹಝಲ್​ನಟ್​ ಮತ್ತು ಬಾತುಕೋಳಿಯನ್ನು ತಿಂದಿದ್ದಳು’ ಎನ್ನುವ ಮಾಹಿತಿಯನ್ನು ಹೊತ್ತ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

ಡಾ. ಡೋರ್ಸಾ ಅಮೀರ್​ ಎಂಬ ಟ್ವೀಟಿಗರು ಇದನ್ನು ಟ್ವೀಟ್ ಮಾಡಿದ್ದಾರೆ. ಕೆಲವರು ಈ ವಿಷಯದ ಸತ್ಯಾಸತ್ಯತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ 5,700 ವರ್ಷ ಹಳೆಯ ಚೂಯಿಂಗ್ ಗಮ್‌ನಿಂದ ಮಾನವ ಜೀನೋಮ್ ಅನ್ನು ಮರಳಿ ಪಡೆದುದರ ಕುರಿತು ಇಂಗ್ಲಿಷ್​ ಲೇಖನವೊಂದರ ಲಿಂಕ್​ ಅನ್ನು ಈಕೆ ಈ ಟ್ವೀಟಿನಡಿ ಲಗತ್ತಿಸಿದ್ದಾರೆ. ಅನೇಕರು ಈ ವಿಷಯದ ಬಗ್ಗೆ ಕುತೂಹಲದಿಂದ ಪ್ರಶ್ನಿಸಿದ್ದಾರೆ.

ಆ ಹುಡುಗಿಯ ಚರ್ಮದ ಬಣ್ಣವನ್ನೂ ಕೂಡ ಅಷ್ಟೊಂದು ದೃಢವಾಗಿ ಪತ್ತೆ ಹಚ್ಚಿದ್ದಾರಲ್ಲ! ಎಂದು ಒಬ್ಬರು ಕೇಳಿದ್ದಾರೆ. ಬಹುಶಃ ಈಕೆ ನನ್ನ ಅಜ್ಜಿಯಾಗಿದ್ದಿರಬಹುದು ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ನಮ್ಮ ಪೂರ್ವಜರು ಬೇಟೆ ಪ್ರವೃತ್ತಿಯಿಂದ ಅವರು ಕೃಷಿಗೆ ಇಳಿದಾಗ ಅವರ ಆಹಾರ ಪದ್ಧತಿಯೂ ಬದಲಾಯಿತು. ಆದ್ದರಿಂದಲೇ ನಮಗೆ ವಿಟಮಿನ್​ ಡಿ ಕೊರತೆ ಉಂಟಾಗಿದೆ ಎನ್ನಿಸುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಹ್ ನನಗಂತೂ ಆ ಬಾಲೆ ಪುಟ್ಟ ಮತ್ಸ್ಯಕನ್ಯೆಯಂತೆ ಕಾಣುತ್ತಿದ್ದಾಳೆ ಎಂದಿದ್ದಾರೆ ಮಗದೊಬ್ಬರು.

andolanait

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

1 hour ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

7 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago