BREAKING NEWS

ಸ್ಕ್ಯಾಂಡಿನೇವಿಯಾ: 6000 ವರ್ಷಗಳ ಹಿಂದಿನ ಚ್ಯೂಯಿಂಗ್​ ಗಮ್ ಪತ್ತೆ

‘ಸ್ಕ್ಯಾಂಡಿನೇವಿಯಾದಲ್ಲಿ 6,000 ವರ್ಷಗಳಷ್ಟು ಹಳೆಯದಾದ ಚ್ಯೂಯಿಂಗ್​ ಗಮ್​  (Chewing Gum) ಪತ್ತೆಯಾಗಿದೆ. ಇಷ್ಟೇ ಅಲ್ಲ ಇದನ್ನು ಜಗಿದವರ ಡಿಎನ್​ಎ (DNA)ಯನ್ನು ಕೂಡ ಇದು ಸಂರಕ್ಷಿಸಿಟ್ಟುಕೊಂಡಿದೆ. ಈ ಚ್ಯೂಯಿಂಗ್​ ಗಮ್​ ಅನ್ನು ಜಗಿದವಳು ಬೇಟೆಗಾರರ ಪುಟ್ಟ ಹುಡುಗಿ, ಈಕೆ ಕಪ್ಪು ಚರ್ಮ, ಕಂದು ಕೂದಲು ಮತ್ತು ನೀಲಿ ಕಣ್ಣುಗಳನ್ನು ಹೊಂದಿದ್ದಳು. ಈ ಚ್ಯೂಯಿಂಗ್​ಗಿಂತ ಮೊದಲು ಈಕೆ ಹಝಲ್​ನಟ್​ ಮತ್ತು ಬಾತುಕೋಳಿಯನ್ನು ತಿಂದಿದ್ದಳು’ ಎನ್ನುವ ಮಾಹಿತಿಯನ್ನು ಹೊತ್ತ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

ಡಾ. ಡೋರ್ಸಾ ಅಮೀರ್​ ಎಂಬ ಟ್ವೀಟಿಗರು ಇದನ್ನು ಟ್ವೀಟ್ ಮಾಡಿದ್ದಾರೆ. ಕೆಲವರು ಈ ವಿಷಯದ ಸತ್ಯಾಸತ್ಯತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ 5,700 ವರ್ಷ ಹಳೆಯ ಚೂಯಿಂಗ್ ಗಮ್‌ನಿಂದ ಮಾನವ ಜೀನೋಮ್ ಅನ್ನು ಮರಳಿ ಪಡೆದುದರ ಕುರಿತು ಇಂಗ್ಲಿಷ್​ ಲೇಖನವೊಂದರ ಲಿಂಕ್​ ಅನ್ನು ಈಕೆ ಈ ಟ್ವೀಟಿನಡಿ ಲಗತ್ತಿಸಿದ್ದಾರೆ. ಅನೇಕರು ಈ ವಿಷಯದ ಬಗ್ಗೆ ಕುತೂಹಲದಿಂದ ಪ್ರಶ್ನಿಸಿದ್ದಾರೆ.

ಆ ಹುಡುಗಿಯ ಚರ್ಮದ ಬಣ್ಣವನ್ನೂ ಕೂಡ ಅಷ್ಟೊಂದು ದೃಢವಾಗಿ ಪತ್ತೆ ಹಚ್ಚಿದ್ದಾರಲ್ಲ! ಎಂದು ಒಬ್ಬರು ಕೇಳಿದ್ದಾರೆ. ಬಹುಶಃ ಈಕೆ ನನ್ನ ಅಜ್ಜಿಯಾಗಿದ್ದಿರಬಹುದು ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ನಮ್ಮ ಪೂರ್ವಜರು ಬೇಟೆ ಪ್ರವೃತ್ತಿಯಿಂದ ಅವರು ಕೃಷಿಗೆ ಇಳಿದಾಗ ಅವರ ಆಹಾರ ಪದ್ಧತಿಯೂ ಬದಲಾಯಿತು. ಆದ್ದರಿಂದಲೇ ನಮಗೆ ವಿಟಮಿನ್​ ಡಿ ಕೊರತೆ ಉಂಟಾಗಿದೆ ಎನ್ನಿಸುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಹ್ ನನಗಂತೂ ಆ ಬಾಲೆ ಪುಟ್ಟ ಮತ್ಸ್ಯಕನ್ಯೆಯಂತೆ ಕಾಣುತ್ತಿದ್ದಾಳೆ ಎಂದಿದ್ದಾರೆ ಮಗದೊಬ್ಬರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago