BREAKING NEWS

ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು

ರಾಮನಗರ : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12)‌ ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್​ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್​​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರ ಕೌಶಿಕ್ ಮೃತದೇಹ ಇಡಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ‌ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ‌ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಎಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

 

lokesh

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

5 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

13 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago