BREAKING NEWS

ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು

ರಾಮನಗರ : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12)‌ ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್​ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್​​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರ ಕೌಶಿಕ್ ಮೃತದೇಹ ಇಡಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ‌ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ‌ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಎಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

 

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

11 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

17 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago