BREAKING NEWS

ವಿರೋಧದ ನಡುವೆಯೂ ಬೆಂ – ಮೈ ಹೆದ್ದಾರಿಯಲ್ಲಿ ಎರಡನೇ ಹಂತದ ಶುಲ್ಕ ಸಂಗ್ರಹ

ಶ್ರೀರಂಗಪಟ್ಟಣ : ಕನ್ನಡಪರ ಸಂಘಟನೆಗಳು ಹಾಗೂ ಸ್ಥಳೀಯರ ವಿರೋಧದ ನಡುವೆಯೂ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಎರಡನೇ ಹಂತದ ಶುಲ್ಕ ಸಂಗ್ರಹ ಗಣಂಗೂರು ಟೋಲ್ ನಲ್ಲಿ ಶನಿವಾರ ಬೆಳಿಗ್ಗೆ ಯಿಂದ ಆರಂಭವಾಯಿತು.
ಟೋಲ್‌ ಸಂಗ್ರಹ ಏಜೆನ್ಸಿಯಾದ ಮುಂಬೈನ ಇಂದರ್‌ದೀಪ್‌ ಕನ್‌ಸ್ಟ್ರಕ್ಷನ್‌ ಕಂಪೆನಿಯ ಸಿಬ್ಬಂದಿಗಳು ಟೋಲ್ ನಲ್ಲಿ ವಾಹನ ಸವಾರರಿಂದ ಶುಲ್ಕ ಸಂಗ್ರಹ ಮಾಡಿದರು.

ಗಣಂಗೂರು ಟೋಲ್ ನಲ್ಲಿಯು ಶುಲ್ಕ ಸಂಗ್ರಹ ಮುಂದಾಗಿರೋದಕ್ಕೆ ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ದಶಪಥ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಈಗಾಗಲೇ ಒಂದು ಟೋಲ್ ಗೆ ಕಟ್ಟುತ್ತಿರುವ ಶುಲ್ಕ ಹೊರೆ ಬೀಳುತ್ತಿದೆ. ಸರ್ವಿಸ್ ರಸ್ತೆಯೆ ಸರಿಯಾಗಿ ಇಲ್ಲ. ಈ ಹೊತ್ತಿನಲ್ಲಿ ಟೋಲ್ ಶುಲ್ಕ ವಸೂಲಿ ಸರಿಯಲ್ಲ ಎಂದು ಜನರು ಕಿಡಿಕಾರಿದ್ದಾರೆ.

ಕನ್ನಡಪರ ಸಂಘಟನೆ ಕಾರ್ಯಕರ್ತರು ಟೋಲ್ ಬಳಿ ಜಮಾಯಿಸಿ ಸರ್ವೀಸ್‌ ರಸ್ತೆ ಪೂರ್ಣಗೊಳಿಸದೇ, ಮೂಲ ಸೌಲಭ್ಯ ಒದಗಿಸದೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಗಣಂಗೂರು ಟೋಲ್‌ನಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ ಶುಲ್ಕ ಸಂಗ್ರಹ ಸ್ಥಗಿತ ಮಾಡಬೇಕು ಎಂದು ಆಗ್ರಹಿಸಿದರು. ನಿನ್ನೆಯಷ್ಟೇ, ಶಾಸಕರಾದ ದಿನೇಶ್‌ ಗೂಳಿಗೌಡ, ರವಿಕುಮಾರ್‌ ಗಣಿಗ, ರಮೇಶ್‌ ಬಂಡಿಸಿದ್ದೇಗೌಡ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಸರ್ವಿಸ್ ರಸ್ತೆಗಳು, ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಕೊರಿದ್ದರು, ಆದರೂ ಸಹ ಟೋಲ್ ನಲ್ಲಿ ಶುಲ್ಕ ವಸೂಲಿ ಆರಂಭಗೊಂಡಿದೆ.ಟೋಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು,ಶುಲ್ಕ ಸಂಗ್ರಹಕ್ಕೆ ಅಡೆತಡೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ,

lokesh

Recent Posts

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

4 mins ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

13 mins ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

17 mins ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

26 mins ago

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

2 hours ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

3 hours ago