BREAKING NEWS

ವಿರೋಧದ ನಡುವೆಯೂ ಬೆಂ – ಮೈ ಹೆದ್ದಾರಿಯಲ್ಲಿ ಎರಡನೇ ಹಂತದ ಶುಲ್ಕ ಸಂಗ್ರಹ

ಶ್ರೀರಂಗಪಟ್ಟಣ : ಕನ್ನಡಪರ ಸಂಘಟನೆಗಳು ಹಾಗೂ ಸ್ಥಳೀಯರ ವಿರೋಧದ ನಡುವೆಯೂ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಎರಡನೇ ಹಂತದ ಶುಲ್ಕ ಸಂಗ್ರಹ ಗಣಂಗೂರು ಟೋಲ್ ನಲ್ಲಿ ಶನಿವಾರ ಬೆಳಿಗ್ಗೆ ಯಿಂದ ಆರಂಭವಾಯಿತು.
ಟೋಲ್‌ ಸಂಗ್ರಹ ಏಜೆನ್ಸಿಯಾದ ಮುಂಬೈನ ಇಂದರ್‌ದೀಪ್‌ ಕನ್‌ಸ್ಟ್ರಕ್ಷನ್‌ ಕಂಪೆನಿಯ ಸಿಬ್ಬಂದಿಗಳು ಟೋಲ್ ನಲ್ಲಿ ವಾಹನ ಸವಾರರಿಂದ ಶುಲ್ಕ ಸಂಗ್ರಹ ಮಾಡಿದರು.

ಗಣಂಗೂರು ಟೋಲ್ ನಲ್ಲಿಯು ಶುಲ್ಕ ಸಂಗ್ರಹ ಮುಂದಾಗಿರೋದಕ್ಕೆ ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ದಶಪಥ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಈಗಾಗಲೇ ಒಂದು ಟೋಲ್ ಗೆ ಕಟ್ಟುತ್ತಿರುವ ಶುಲ್ಕ ಹೊರೆ ಬೀಳುತ್ತಿದೆ. ಸರ್ವಿಸ್ ರಸ್ತೆಯೆ ಸರಿಯಾಗಿ ಇಲ್ಲ. ಈ ಹೊತ್ತಿನಲ್ಲಿ ಟೋಲ್ ಶುಲ್ಕ ವಸೂಲಿ ಸರಿಯಲ್ಲ ಎಂದು ಜನರು ಕಿಡಿಕಾರಿದ್ದಾರೆ.

ಕನ್ನಡಪರ ಸಂಘಟನೆ ಕಾರ್ಯಕರ್ತರು ಟೋಲ್ ಬಳಿ ಜಮಾಯಿಸಿ ಸರ್ವೀಸ್‌ ರಸ್ತೆ ಪೂರ್ಣಗೊಳಿಸದೇ, ಮೂಲ ಸೌಲಭ್ಯ ಒದಗಿಸದೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಗಣಂಗೂರು ಟೋಲ್‌ನಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ ಶುಲ್ಕ ಸಂಗ್ರಹ ಸ್ಥಗಿತ ಮಾಡಬೇಕು ಎಂದು ಆಗ್ರಹಿಸಿದರು. ನಿನ್ನೆಯಷ್ಟೇ, ಶಾಸಕರಾದ ದಿನೇಶ್‌ ಗೂಳಿಗೌಡ, ರವಿಕುಮಾರ್‌ ಗಣಿಗ, ರಮೇಶ್‌ ಬಂಡಿಸಿದ್ದೇಗೌಡ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಸರ್ವಿಸ್ ರಸ್ತೆಗಳು, ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಕೊರಿದ್ದರು, ಆದರೂ ಸಹ ಟೋಲ್ ನಲ್ಲಿ ಶುಲ್ಕ ವಸೂಲಿ ಆರಂಭಗೊಂಡಿದೆ.ಟೋಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು,ಶುಲ್ಕ ಸಂಗ್ರಹಕ್ಕೆ ಅಡೆತಡೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ,

lokesh

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

3 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

4 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

4 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago