ಶ್ರೀರಂಗಪಟ್ಟಣ : ಕನ್ನಡಪರ ಸಂಘಟನೆಗಳು ಹಾಗೂ ಸ್ಥಳೀಯರ ವಿರೋಧದ ನಡುವೆಯೂ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಎರಡನೇ ಹಂತದ ಶುಲ್ಕ ಸಂಗ್ರಹ ಗಣಂಗೂರು ಟೋಲ್ ನಲ್ಲಿ ಶನಿವಾರ ಬೆಳಿಗ್ಗೆ ಯಿಂದ ಆರಂಭವಾಯಿತು.
ಟೋಲ್ ಸಂಗ್ರಹ ಏಜೆನ್ಸಿಯಾದ ಮುಂಬೈನ ಇಂದರ್ದೀಪ್ ಕನ್ಸ್ಟ್ರಕ್ಷನ್ ಕಂಪೆನಿಯ ಸಿಬ್ಬಂದಿಗಳು ಟೋಲ್ ನಲ್ಲಿ ವಾಹನ ಸವಾರರಿಂದ ಶುಲ್ಕ ಸಂಗ್ರಹ ಮಾಡಿದರು.
ಗಣಂಗೂರು ಟೋಲ್ ನಲ್ಲಿಯು ಶುಲ್ಕ ಸಂಗ್ರಹ ಮುಂದಾಗಿರೋದಕ್ಕೆ ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ದಶಪಥ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಈಗಾಗಲೇ ಒಂದು ಟೋಲ್ ಗೆ ಕಟ್ಟುತ್ತಿರುವ ಶುಲ್ಕ ಹೊರೆ ಬೀಳುತ್ತಿದೆ. ಸರ್ವಿಸ್ ರಸ್ತೆಯೆ ಸರಿಯಾಗಿ ಇಲ್ಲ. ಈ ಹೊತ್ತಿನಲ್ಲಿ ಟೋಲ್ ಶುಲ್ಕ ವಸೂಲಿ ಸರಿಯಲ್ಲ ಎಂದು ಜನರು ಕಿಡಿಕಾರಿದ್ದಾರೆ.
ಕನ್ನಡಪರ ಸಂಘಟನೆ ಕಾರ್ಯಕರ್ತರು ಟೋಲ್ ಬಳಿ ಜಮಾಯಿಸಿ ಸರ್ವೀಸ್ ರಸ್ತೆ ಪೂರ್ಣಗೊಳಿಸದೇ, ಮೂಲ ಸೌಲಭ್ಯ ಒದಗಿಸದೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಗಣಂಗೂರು ಟೋಲ್ನಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ ಶುಲ್ಕ ಸಂಗ್ರಹ ಸ್ಥಗಿತ ಮಾಡಬೇಕು ಎಂದು ಆಗ್ರಹಿಸಿದರು. ನಿನ್ನೆಯಷ್ಟೇ, ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಸರ್ವಿಸ್ ರಸ್ತೆಗಳು, ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಕೊರಿದ್ದರು, ಆದರೂ ಸಹ ಟೋಲ್ ನಲ್ಲಿ ಶುಲ್ಕ ವಸೂಲಿ ಆರಂಭಗೊಂಡಿದೆ.ಟೋಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು,ಶುಲ್ಕ ಸಂಗ್ರಹಕ್ಕೆ ಅಡೆತಡೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ,
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…