ಕೇರಳ : ದೇಶಾದ್ಯಂತ ಮತ್ತೆ ಕೊರೊನಾದ ಆತಂಕ ಸೃಷ್ಟಿಯಾಗಿದ್ದು, ಕೇರಳದಲ್ಲಿ ಕಳೆಡೆರೆಡು ದಿನಗಳಲ್ಲಿ ೨ ಸಾವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.
ನಿನ್ನೆ ಕೊರೊನಾ ಹೊಸತಳಿ ಜೆಎನ್೧ಗೆ 80 ವರ್ಷ ವೃದ್ಧ ಸಾವನ್ನಪ್ಪಿದ್ದರು. ಇಂದು ಮತ್ತೊಂದು ಸಾವಾಗಿದ್ದು, ಕಳೆದ ೧೦ ದಿನದಲ್ಲಿ ಮೂರು ಸಾವು ಸಂಭವಿಸಿದೆ.
ಇಲ್ಲಿನ 68 ವರ್ಷದ ಅಬ್ದುಲ್ ಅಜೀಜ್ ಎಂಬ ವೃದ್ಧರೊಬ್ಬರು ಮಾರಕ ವೈರಾಣುವಿಗೆ ಬಲಿಯಾಗಿದ್ದಾರೆ. ಅಧಿಕ ರಕ್ತದೊತ್ತಡದಿಂದ ಬಳಳುತ್ತಿದ್ದ ಅಬ್ದುಲ್ ಅವರನ್ನು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇರಳದಲ್ಲಿ ಕೊರೊನಾ ವೈರಸ್ಗೆ ಇಬ್ಬರು ಬಲಿಯಾದಂತಾಗಿದೆ.
ಒಮಿಕ್ರಾನ್ ಹೊಸ ತಳಿ ಬಿಎ.2.86 ರೂಪಾಂತರ ತಳಿ ಜೆಎನ್1 ಆಗಿದೆ. ಸಾಂಕ್ರಾಮಿಕ ಕಾಯಿಲೆಗಳ ನಡವೆ ಮತ್ತೆ ಕೋವಿಡ್ ಭೀತಿ ಹೆಚ್ಚಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಯಾವೆಲ್ಲಾ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…