ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.
22 ಮಂದಿಯ ಸಾವಿಗೆ ಕಾರಣವಾದ ಕೇರಳದ ಮಲಪ್ಪುರಂನ ತನೂರ್ ದೋಣಿ ದುರಂತದ ಕುರಿತು ಕೇರಳ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ಅನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. “ಅಧಿಕಾರಿಗಳು ಎಲ್ಲಿದ್ದಾರೆ? ಅವರು ಏನು ಮಾಡುತ್ತಿದ್ದರು ಎಂದು ದೋಣಿ ಅಪಘಾತದ ಬಗ್ಗೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ದ ಚಾಟಿ ಬೀಸಿದೆ.
ಅಪಘಾತವು ಆಘಾತಕಾರಿ ಮತ್ತು ಕಾಡುವ ಸಂಗತಿಯಾಗಿದೆ ಮತ್ತು ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಭಾನುವಾರ ರಾತ್ರಿ 7.30ರ ಸುಮಾರಿಗೆ ತನೂರಿನ ತೂವಲ್ತೀರಂ ಕಡಲತೀರದ ಸಮೀಪವಿರುವ ಅಳಿವೆ ಬಳಿ ದೋಣಿ ಮಗುಚಿ ಬಿದ್ದಿದ್ದು, ಜಿಲ್ಲೆಯ ಅಧಿಕಾರಿಗಳ ದುರಂತದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಎಂಟು ತಿಂಗಳ ಮಗು ಸೇರಿ 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕರು ಸೇರಿದಂತೆ ದೋಣಿಯಲ್ಲಿ 37 ಮಂದಿ ಇದ್ದರು ಎಂದು ಹೇಳಲಾಗಿದೆ.
ತನಿಖೆಗೆ ಎಸ್ಐಟಿ ರಚನೆ : ಇನ್ನು ಭಾನುವಾರ ಸಂಜೆ ಮಲಪ್ಪುರಂ ಜಿಲ್ಲೆಯ ತಾನೂರ್ ಪ್ರದೇಶದಲ್ಲಿ 22 ಜನರನ್ನು ಬಲಿತೆಗೆದುಕೊಂಡ ದುರಂತ ದೋಣಿ ದುರಂತದ ತನಿಖೆಗಾಗಿ ಕೇರಳ ಪೊಲೀಸರು ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರು ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಜಿತ್ ದಾಸ್ ಎಸ್ ಅವರನ್ನು ತಂಡದ ಮುಖ್ಯಸ್ಥರಾಗಿ ವಹಿಸಿ ಆದೇಶ ಹೊರಡಿಸಿದ್ದಾರೆ.
ತನೂರ್ ಡಿವೈಎಸ್ಪಿ ವಿ ವಿ ಬೆನ್ನಿ, ತಾನೂರು ಠಾಣಾಧಿಕಾರಿ ಜೀವನ್ ಜಾರ್ಜ್ ಮತ್ತು ಕೊಂಡೊಟ್ಟಿ ಎಎಸ್ ಪಿ ವಿಜಯ ಭರತ್ ರೆಡ್ಡಿ ವಿಶೇಷ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ. ಉತ್ತರ ವಲಯದ ಐಜಿ ನೀರಜ್ ಕುಮಾರ್ ಗುಪ್ತಾ ಅವರ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ ಎಂದು ಅದು ಹೇಳಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಡಿಜಿಪಿ ಸೂಚಿಸಿದ್ದಾರೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…