BREAKING NEWS

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್ : ಪೊಲೀಸ್ ಎಸ್ಐಟಿ ತಂಡ ರಚನೆ

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

22 ಮಂದಿಯ ಸಾವಿಗೆ ಕಾರಣವಾದ ಕೇರಳದ ಮಲಪ್ಪುರಂನ ತನೂರ್ ದೋಣಿ ದುರಂತದ ಕುರಿತು ಕೇರಳ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ಅನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. “ಅಧಿಕಾರಿಗಳು ಎಲ್ಲಿದ್ದಾರೆ? ಅವರು ಏನು ಮಾಡುತ್ತಿದ್ದರು ಎಂದು ದೋಣಿ ಅಪಘಾತದ ಬಗ್ಗೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ದ ಚಾಟಿ ಬೀಸಿದೆ.

ಅಪಘಾತವು ಆಘಾತಕಾರಿ ಮತ್ತು ಕಾಡುವ ಸಂಗತಿಯಾಗಿದೆ ಮತ್ತು ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಭಾನುವಾರ ರಾತ್ರಿ 7.30ರ ಸುಮಾರಿಗೆ ತನೂರಿನ ತೂವಲ್ತೀರಂ ಕಡಲತೀರದ ಸಮೀಪವಿರುವ ಅಳಿವೆ ಬಳಿ ದೋಣಿ ಮಗುಚಿ ಬಿದ್ದಿದ್ದು, ಜಿಲ್ಲೆಯ ಅಧಿಕಾರಿಗಳ ದುರಂತದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಎಂಟು ತಿಂಗಳ ಮಗು ಸೇರಿ 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕರು ಸೇರಿದಂತೆ ದೋಣಿಯಲ್ಲಿ 37 ಮಂದಿ ಇದ್ದರು ಎಂದು ಹೇಳಲಾಗಿದೆ.

ತನಿಖೆಗೆ ಎಸ್‌ಐಟಿ ರಚನೆ : ಇನ್ನು ಭಾನುವಾರ ಸಂಜೆ ಮಲಪ್ಪುರಂ ಜಿಲ್ಲೆಯ ತಾನೂರ್ ಪ್ರದೇಶದಲ್ಲಿ 22 ಜನರನ್ನು ಬಲಿತೆಗೆದುಕೊಂಡ ದುರಂತ ದೋಣಿ ದುರಂತದ ತನಿಖೆಗಾಗಿ ಕೇರಳ ಪೊಲೀಸರು ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರು ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಜಿತ್ ದಾಸ್ ಎಸ್ ಅವರನ್ನು ತಂಡದ ಮುಖ್ಯಸ್ಥರಾಗಿ ವಹಿಸಿ ಆದೇಶ ಹೊರಡಿಸಿದ್ದಾರೆ.

ತನೂರ್ ಡಿವೈಎಸ್ಪಿ ವಿ ವಿ ಬೆನ್ನಿ, ತಾನೂರು ಠಾಣಾಧಿಕಾರಿ ಜೀವನ್ ಜಾರ್ಜ್ ಮತ್ತು ಕೊಂಡೊಟ್ಟಿ ಎಎಸ್ ಪಿ ವಿಜಯ ಭರತ್ ರೆಡ್ಡಿ ವಿಶೇಷ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ. ಉತ್ತರ ವಲಯದ ಐಜಿ ನೀರಜ್ ಕುಮಾರ್ ಗುಪ್ತಾ ಅವರ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ ಎಂದು ಅದು ಹೇಳಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಡಿಜಿಪಿ ಸೂಚಿಸಿದ್ದಾರೆ.

lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago