BREAKING NEWS

ರಾ ಸಂಸ್ಥೆಯ ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ನೇಮಕ!

ನವದೆಹಲಿ: ದೇಶದ ಬೇಹುಗಾರಿಕಾ ಸಂಸ್ಥೆ ರಾಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಎರಡು ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿಯನ್ನಾಗಿ ರವಿ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಪ್ರಸ್ತುತ ರಾ ಮುಖ್ಯಸ್ಥ ಸಮಂತ್‌ ಕುಮಾರ್‌ ಗೋಯಲ್‌ ಅವರ ನಾಲ್ಕು ವರ್ಷಗಳ ಅಧಿಕಾರಾವಧಿ ಜೂನ್‌ 30ರಂದು ಅಂತ್ಯವಾಗಲಿದೆ. ಅವರ ಬಳಿಕ ರವಿ ಸಿನ್ಹಾ ಅವರು ರಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಛತ್ತೀಸ್‌ಗಢ ಕೇಡರ್‌ನ 1988ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ ಅಧಿಕಾರಿಯಾಗಿರುವ ರವಿ ಸಿನ್ಹಾ ಅವರು ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನಲ್ಲಿ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಮಂತ್‌ ಗೋಯಲ್‌ ಬಳಿಕ ಎರಡು ವರ್ಷಗಳ ಅವಧಿಗೆ ರಾ ಕಾರ್ಯದರ್ಶಿಯಾಗಿ ರವಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ರವಿ ಸಿನ್ಹಾ ಅವರು ತಮ್ಮ ಕಾರ್ಯತಂತ್ರ ಹಾಗೂ ಬೇಹುಗಾರಿಕಾ ಕೌಶಲ್ಯಗಳಿಗೆ ಹೆಸರಾಗಿದ್ದು, ಈಗ ರಾ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ.

ಸಮಂತ್‌ ಗೋಯಲ್‌ ಯಶಸ್ವಿ!

ಹಾಲಿ ರಾ ಮುಖ್ಯಸ್ಥ ಸಮಂತ್‌ ಗೋಯಲ್‌ ತಮ್ಮ ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. 1984ರ ಪಂಜಾಬ್‌ ಕೇಡರ್‌ನ ಸಮಂತ್‌ ಕುಮಾರ್‌ ಗೋಯಲ್‌ ಜೂನ್‌ 2019ರಲ್ಲಿ ರಾ ಮುಖ್ಯಸ್ಥರಾಗಿ ನೇಮಕವಾಗಿದ್ದರು. ಅನಿಲ್‌ ಧಾಸ್ಮನಾ ಬಳಿಕ ರಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಸಮಂತ್‌ ಗೋಯಲ್‌ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಬಾಲಾಕೋಟ್‌ ಏರ್‌ಸ್ಟ್ರೈಕ್‌ ಹಾಗೂ ಶಾಂತಿಯುತವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ 380ನೇ ವಿಧಿ ರದ್ದು ಮಾಡಿರುವುದು ಮತ್ತು ಪಾಕಿಸ್ತಾನಿ ಹಾಗೂ ಖಲಿಸ್ತಾನಿ ಉಗ್ರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗಿತ್ತು. ಇವರ ಅವಧಿಯನ್ನು ಕಳೆದ ವರ್ಷ ಒಂದು ವರ್ಷ ವಿಸ್ತರಿಸಲಾಗಿತ್ತು. ಈಗ ಗೋಯಲ್‌ ಬಳಿಕ ರವಿ ಸಿನ್ಹಾ ರಾ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ.

ಏನಿದು ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ಸಂಸ್ಥೆ?

1968ರಲ್ಲಿ ರಾ ಏಜೆನ್ಸಿಯನ್ನು ಸ್ಥಾಪಿಸಲಾಗಿದ್ದು, ಭಾರತದ ಪ್ರಧಾನ ವಿದೇಶಿ ಗುಪ್ತಚರ ಸಂಸ್ಥೆಯಾಗಿದೆ. ಚೀನಾ ಮತ್ತು ಪಾಕಿಸ್ತಾನದ ಚಟುವಟಿಕೆ ಮೇಲೆ ಕಣ್ಣಿಡಲು ರಾ ಅನ್ನು ಪ್ರಾರಂಭಿಸಲಾಯಿತು. ಕಳೆದ ಕೆಲವು ದಶಕಗಳಲ್ಲಿ ರಾ ವ್ಯಾಪ್ತಿ ಜಗತ್ತಿನಾದ್ಯಂತ ವಿಸ್ತರಿತವಾಗಿದೆ. ಅಮೆರಿಕದ ಸಿಐಎ ಹಾಗೂ ಬ್ರಿಟನ್‌ನ ಎಂಐ6 ಸಂಸ್ಥೆಗಳಿಗಿಂತ ರಾ ಭಿನ್ನವಾಗಿದ್ದು, ರಕ್ಷಣಾ ಸಚಿವಾಲಯದ ಬದಲಾಗಿ ನೇರವಾಗಿ ಪ್ರಧಾನ ಮಂತ್ರಿಗಳಿಗೆ ರಾ ಸಂಸ್ಥೆ ವರದಿ ಮಾಡುತ್ತದೆ. ಇನ್ನು, ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಸಂಸ್ಥೆಯ ಅಧಿಕಾರಗಳು ಮತ್ತು ಭಾರತದ ವಿದೇಶಾಂಗ ನೀತಿಯಲ್ಲಿ ಅದರ ಪಾತ್ರ ವಿವಿಧ ಪ್ರಧಾನ ಮಂತ್ರಿಗಳ ಅಡಿಯಲ್ಲಿ ಬದಲಾಗುತ್ತಾ ಸಾಗಿದೆ.

andolanait

Recent Posts

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

1 hour ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

2 hours ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

3 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

3 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

3 hours ago