BREAKING NEWS

ಕೇರಳದಲ್ಲಿ ಸರಣಿ ಸ್ಫೋಟ: ಪಿಣರಾಯಿ ವಿಜಯನ್ ಜೊತೆ ಅಮಿತ್ ಶಾ ತುರ್ತು ಮಾತುಕತೆ

ನವದೆಹಲಿ : ಕೇರಳದ ಕೊಚ್ಚಿಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ತುರ್ತು ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಕೇಂದ್ರದ ತನಿಖಾ ತಂಡಗಳ ನೆರವಿನ ಕುರಿತಾಗಿ ಉಭಯ ನಾಯಕರು ವಿಚಾರ ವಿಮರ್ಶೆ ನಡೆಸಿದ್ದಾರೆ.

ರಾಷ್ಟ್ರೀಯ ಭದ್ರತಾ ಪಡೆ ಎನ್‌ಎಸ್‌ಜಿ ಹಾಗೂ ರಾಷ್ಟ್ರೀಯ ತನಿಖಾ ದಳ ಎನ್‌ಐಎ ಸಿಬ್ಬಂದಿಗೆ ಈ ಕೂಡಲೇ ಕೇರಳ ರಾಜ್ಯಕ್ಕೆ ಧಾವಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ. ಕೇಂದ್ರದ ಈ ತಂಡಗಳು ಕೇರಳ ರಾಜ್ಯ ಸರ್ಕಾರಕ್ಕೆ ಹಾಗೂ ಕೇರಳ ಪೊಲೀಸರಿಗೆ ತನಿಖೆ ವೇಳೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ನೆರವು ನೀಡಲಿವೆ.

ಸ್ಫೋಟ ಘಟನೆಯ ಸುದ್ದಿ ತಿಳಿದ ಕೂಡಲೇ ಕೇರಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ದೂರವಾಣಿ ಕರೆ ಮಾಡಿದರು ಎಂದು ತಿಳಿದು ಬಂದಿದೆ. ಈ ವೇಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಘಟನೆ ಕುರಿತ ಸಮಗ್ರ ಮಾಹಿತಿ ನೀಡಿದ್ದಾರೆ. ಈ ವೇಳೆ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತಾಗಿ ಪಿಣರಾಯಿ ವಿಜಯನ್ ಅವರ ಜೊತೆ ಅಮಿತ್ ಶಾ ಅವಲೋಕನ ನಡೆಸಿದರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಕೇರಳ ರಾಜ್ಯದ ಕೊಚ್ಚಿ ನಗರದಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಕ್ರೈಸ್ತರ ಒಂದು ಪಂಗಡಕ್ಕೆ ಸೇರಿದ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಪ್ರಾರ್ಥನಾ ಮಂದಿರದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು ಎಂಬ ಮಾಹಿತಿ ಇದೆ. ಪ್ರಾರ್ಥನೆ ಆರಂಭ ಆದ ಕೂಡಲೇ ಸ್ಫೋಟ ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಮೂರು ಬಾರಿ ಸ್ಫೋಟದ ಸದ್ದು ಕೇಳಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಸರಣಿ ಸ್ಫೋಟದಲ್ಲಿ ಕನಿಷ್ಟ ಓರ್ವ ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲೇ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರದಲ್ಲಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ವೇಳೆ ಜನರು ಒಮ್ಮೆಲೇ ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹತ್ತಾರು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ.

ಇನ್ನು ಇದು ಯಾವ ರೀತಿಯ ಸ್ಫೋಟ ಅನ್ನೋದ್ರ ಕುರಿತಾಗಿ ಸ್ಪಷ್ಟ ಚಿತ್ರಣ ಇನ್ನಷ್ಟೇ ಹೊರ ಬೀಳಬೇಕಿದೆ. ಈ ಕುರಿತಾಗಿ ಎನ್‌ಐಎ ಸಮಗ್ರ ತನಿಖೆ ನಡೆಯಲಿದೆ. ಇದು ಭಯೋತ್ಪಾದಕರ ಕೃತ್ಯವೇ ಅನ್ನೋ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಆದರೆ, ಸರ್ಕಾರ ಈ ಕುರಿತಾಗಿ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ.

andolanait

Recent Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

18 mins ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

26 mins ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

4 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

4 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

4 hours ago