ನವದೆಹಲಿ : ಕೇರಳದ ಕೊಚ್ಚಿಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ತುರ್ತು ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಕೇಂದ್ರದ ತನಿಖಾ ತಂಡಗಳ ನೆರವಿನ ಕುರಿತಾಗಿ ಉಭಯ ನಾಯಕರು ವಿಚಾರ ವಿಮರ್ಶೆ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತಾ ಪಡೆ ಎನ್ಎಸ್ಜಿ ಹಾಗೂ ರಾಷ್ಟ್ರೀಯ ತನಿಖಾ ದಳ ಎನ್ಐಎ ಸಿಬ್ಬಂದಿಗೆ ಈ ಕೂಡಲೇ ಕೇರಳ ರಾಜ್ಯಕ್ಕೆ ಧಾವಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ. ಕೇಂದ್ರದ ಈ ತಂಡಗಳು ಕೇರಳ ರಾಜ್ಯ ಸರ್ಕಾರಕ್ಕೆ ಹಾಗೂ ಕೇರಳ ಪೊಲೀಸರಿಗೆ ತನಿಖೆ ವೇಳೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ನೆರವು ನೀಡಲಿವೆ.
ಸ್ಫೋಟ ಘಟನೆಯ ಸುದ್ದಿ ತಿಳಿದ ಕೂಡಲೇ ಕೇರಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ದೂರವಾಣಿ ಕರೆ ಮಾಡಿದರು ಎಂದು ತಿಳಿದು ಬಂದಿದೆ. ಈ ವೇಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಘಟನೆ ಕುರಿತ ಸಮಗ್ರ ಮಾಹಿತಿ ನೀಡಿದ್ದಾರೆ. ಈ ವೇಳೆ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತಾಗಿ ಪಿಣರಾಯಿ ವಿಜಯನ್ ಅವರ ಜೊತೆ ಅಮಿತ್ ಶಾ ಅವಲೋಕನ ನಡೆಸಿದರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಕೇರಳ ರಾಜ್ಯದ ಕೊಚ್ಚಿ ನಗರದಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಕ್ರೈಸ್ತರ ಒಂದು ಪಂಗಡಕ್ಕೆ ಸೇರಿದ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಪ್ರಾರ್ಥನಾ ಮಂದಿರದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು ಎಂಬ ಮಾಹಿತಿ ಇದೆ. ಪ್ರಾರ್ಥನೆ ಆರಂಭ ಆದ ಕೂಡಲೇ ಸ್ಫೋಟ ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಮೂರು ಬಾರಿ ಸ್ಫೋಟದ ಸದ್ದು ಕೇಳಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಸರಣಿ ಸ್ಫೋಟದಲ್ಲಿ ಕನಿಷ್ಟ ಓರ್ವ ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲೇ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರದಲ್ಲಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ವೇಳೆ ಜನರು ಒಮ್ಮೆಲೇ ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹತ್ತಾರು ಆಂಬುಲೆನ್ಸ್ಗಳು ಸ್ಥಳಕ್ಕೆ ಧಾವಿಸಿವೆ.
ಇನ್ನು ಇದು ಯಾವ ರೀತಿಯ ಸ್ಫೋಟ ಅನ್ನೋದ್ರ ಕುರಿತಾಗಿ ಸ್ಪಷ್ಟ ಚಿತ್ರಣ ಇನ್ನಷ್ಟೇ ಹೊರ ಬೀಳಬೇಕಿದೆ. ಈ ಕುರಿತಾಗಿ ಎನ್ಐಎ ಸಮಗ್ರ ತನಿಖೆ ನಡೆಯಲಿದೆ. ಇದು ಭಯೋತ್ಪಾದಕರ ಕೃತ್ಯವೇ ಅನ್ನೋ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಆದರೆ, ಸರ್ಕಾರ ಈ ಕುರಿತಾಗಿ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…