ನವದೆಹಲಿ : ಕೇರಳದ ಕೊಚ್ಚಿಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ತುರ್ತು ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಕೇಂದ್ರದ ತನಿಖಾ ತಂಡಗಳ ನೆರವಿನ ಕುರಿತಾಗಿ ಉಭಯ ನಾಯಕರು ವಿಚಾರ ವಿಮರ್ಶೆ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತಾ ಪಡೆ ಎನ್ಎಸ್ಜಿ ಹಾಗೂ ರಾಷ್ಟ್ರೀಯ ತನಿಖಾ ದಳ ಎನ್ಐಎ ಸಿಬ್ಬಂದಿಗೆ ಈ ಕೂಡಲೇ ಕೇರಳ ರಾಜ್ಯಕ್ಕೆ ಧಾವಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ. ಕೇಂದ್ರದ ಈ ತಂಡಗಳು ಕೇರಳ ರಾಜ್ಯ ಸರ್ಕಾರಕ್ಕೆ ಹಾಗೂ ಕೇರಳ ಪೊಲೀಸರಿಗೆ ತನಿಖೆ ವೇಳೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ನೆರವು ನೀಡಲಿವೆ.
ಸ್ಫೋಟ ಘಟನೆಯ ಸುದ್ದಿ ತಿಳಿದ ಕೂಡಲೇ ಕೇರಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ದೂರವಾಣಿ ಕರೆ ಮಾಡಿದರು ಎಂದು ತಿಳಿದು ಬಂದಿದೆ. ಈ ವೇಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಘಟನೆ ಕುರಿತ ಸಮಗ್ರ ಮಾಹಿತಿ ನೀಡಿದ್ದಾರೆ. ಈ ವೇಳೆ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತಾಗಿ ಪಿಣರಾಯಿ ವಿಜಯನ್ ಅವರ ಜೊತೆ ಅಮಿತ್ ಶಾ ಅವಲೋಕನ ನಡೆಸಿದರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಕೇರಳ ರಾಜ್ಯದ ಕೊಚ್ಚಿ ನಗರದಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಕ್ರೈಸ್ತರ ಒಂದು ಪಂಗಡಕ್ಕೆ ಸೇರಿದ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಪ್ರಾರ್ಥನಾ ಮಂದಿರದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು ಎಂಬ ಮಾಹಿತಿ ಇದೆ. ಪ್ರಾರ್ಥನೆ ಆರಂಭ ಆದ ಕೂಡಲೇ ಸ್ಫೋಟ ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಮೂರು ಬಾರಿ ಸ್ಫೋಟದ ಸದ್ದು ಕೇಳಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಸರಣಿ ಸ್ಫೋಟದಲ್ಲಿ ಕನಿಷ್ಟ ಓರ್ವ ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲೇ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರದಲ್ಲಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ವೇಳೆ ಜನರು ಒಮ್ಮೆಲೇ ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹತ್ತಾರು ಆಂಬುಲೆನ್ಸ್ಗಳು ಸ್ಥಳಕ್ಕೆ ಧಾವಿಸಿವೆ.
ಇನ್ನು ಇದು ಯಾವ ರೀತಿಯ ಸ್ಫೋಟ ಅನ್ನೋದ್ರ ಕುರಿತಾಗಿ ಸ್ಪಷ್ಟ ಚಿತ್ರಣ ಇನ್ನಷ್ಟೇ ಹೊರ ಬೀಳಬೇಕಿದೆ. ಈ ಕುರಿತಾಗಿ ಎನ್ಐಎ ಸಮಗ್ರ ತನಿಖೆ ನಡೆಯಲಿದೆ. ಇದು ಭಯೋತ್ಪಾದಕರ ಕೃತ್ಯವೇ ಅನ್ನೋ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಆದರೆ, ಸರ್ಕಾರ ಈ ಕುರಿತಾಗಿ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…