BREAKING NEWS

ಕೇರಳದಲ್ಲಿ ಸರಣಿ ಸ್ಫೋಟ: ಪಿಣರಾಯಿ ವಿಜಯನ್ ಜೊತೆ ಅಮಿತ್ ಶಾ ತುರ್ತು ಮಾತುಕತೆ

ನವದೆಹಲಿ : ಕೇರಳದ ಕೊಚ್ಚಿಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ತುರ್ತು ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಕೇಂದ್ರದ ತನಿಖಾ ತಂಡಗಳ ನೆರವಿನ ಕುರಿತಾಗಿ ಉಭಯ ನಾಯಕರು ವಿಚಾರ ವಿಮರ್ಶೆ ನಡೆಸಿದ್ದಾರೆ.

ರಾಷ್ಟ್ರೀಯ ಭದ್ರತಾ ಪಡೆ ಎನ್‌ಎಸ್‌ಜಿ ಹಾಗೂ ರಾಷ್ಟ್ರೀಯ ತನಿಖಾ ದಳ ಎನ್‌ಐಎ ಸಿಬ್ಬಂದಿಗೆ ಈ ಕೂಡಲೇ ಕೇರಳ ರಾಜ್ಯಕ್ಕೆ ಧಾವಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ. ಕೇಂದ್ರದ ಈ ತಂಡಗಳು ಕೇರಳ ರಾಜ್ಯ ಸರ್ಕಾರಕ್ಕೆ ಹಾಗೂ ಕೇರಳ ಪೊಲೀಸರಿಗೆ ತನಿಖೆ ವೇಳೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ನೆರವು ನೀಡಲಿವೆ.

ಸ್ಫೋಟ ಘಟನೆಯ ಸುದ್ದಿ ತಿಳಿದ ಕೂಡಲೇ ಕೇರಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ದೂರವಾಣಿ ಕರೆ ಮಾಡಿದರು ಎಂದು ತಿಳಿದು ಬಂದಿದೆ. ಈ ವೇಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಘಟನೆ ಕುರಿತ ಸಮಗ್ರ ಮಾಹಿತಿ ನೀಡಿದ್ದಾರೆ. ಈ ವೇಳೆ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತಾಗಿ ಪಿಣರಾಯಿ ವಿಜಯನ್ ಅವರ ಜೊತೆ ಅಮಿತ್ ಶಾ ಅವಲೋಕನ ನಡೆಸಿದರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಕೇರಳ ರಾಜ್ಯದ ಕೊಚ್ಚಿ ನಗರದಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಕ್ರೈಸ್ತರ ಒಂದು ಪಂಗಡಕ್ಕೆ ಸೇರಿದ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಪ್ರಾರ್ಥನಾ ಮಂದಿರದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು ಎಂಬ ಮಾಹಿತಿ ಇದೆ. ಪ್ರಾರ್ಥನೆ ಆರಂಭ ಆದ ಕೂಡಲೇ ಸ್ಫೋಟ ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಮೂರು ಬಾರಿ ಸ್ಫೋಟದ ಸದ್ದು ಕೇಳಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಸರಣಿ ಸ್ಫೋಟದಲ್ಲಿ ಕನಿಷ್ಟ ಓರ್ವ ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲೇ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರದಲ್ಲಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ವೇಳೆ ಜನರು ಒಮ್ಮೆಲೇ ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹತ್ತಾರು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ.

ಇನ್ನು ಇದು ಯಾವ ರೀತಿಯ ಸ್ಫೋಟ ಅನ್ನೋದ್ರ ಕುರಿತಾಗಿ ಸ್ಪಷ್ಟ ಚಿತ್ರಣ ಇನ್ನಷ್ಟೇ ಹೊರ ಬೀಳಬೇಕಿದೆ. ಈ ಕುರಿತಾಗಿ ಎನ್‌ಐಎ ಸಮಗ್ರ ತನಿಖೆ ನಡೆಯಲಿದೆ. ಇದು ಭಯೋತ್ಪಾದಕರ ಕೃತ್ಯವೇ ಅನ್ನೋ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಆದರೆ, ಸರ್ಕಾರ ಈ ಕುರಿತಾಗಿ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ.

andolanait

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

5 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

6 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

9 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

11 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago