BREAKING NEWS

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಫೋಟ : ಒಂದು ಸಾವು ಸಾವು, 23 ಜನರಿಗೆ ಗಾಯ

ಕೊಚ್ಚಿ: ಭಾನುವಾರದ ಪ್ರಾರ್ಥನೆ ವೇಳೆ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಫೋಟ ಸಂಭವಿಸಿದ ಘಟನೆ ಕೇರಳ ರಾಜ್ಯದ ಕಲಮಸ್ಸೆರಿ ಎಂಬಲ್ಲಿ ನಡೆದಿದೆ. ಕೆಲವೇ ನಿಮಿಷಗಳ ಅಂತರದಲ್ಲಿ ಮೂರು ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕೇರಳ ರಾಜ್ಯದ ಕೊಚ್ಚಿಯಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಇರುವ ಜೆಹೋವಾಸ್ ವಿಟ್ನೆಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಇದು ಕ್ರೈಸ್ತರ ಒಂದು ಪಂಗಡದ ಪ್ರಾರ್ಥನಾ ಮಂದಿರವಾಗಿದೆ. ಇಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಪ್ರಾರ್ಥನೆಯ ಮಧ್ಯದಲ್ಲೇ ಸ್ಫೋಟ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸುಮಾರು 2 ಸಾವಿರ ಮಂದಿ ಈ ಪ್ರಾರ್ಥನಾ ಮಂದಿರಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸ್ಫೋಟ ಸಂಭವಿಸಿದ ಕೂಡಲೇ ಪ್ರಾರ್ಥನೆ ನಡೆಸುತ್ತಿದ್ದವರು ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದರು. ಪ್ರಾರ್ಥನಾ ಮಂದಿರದ ಒಳಗೆ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಸ್ಫೋಟ ಸಂಭವಿಸಿದ ವೇಳೆ ಓರ್ವ ಗಾಯಗೊಂಡು 23 ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದೆ.

ಒಟ್ಟು ಮೂರು ಬಾರಿ ಸ್ಫೋಟ ಸಂಭವಿಸಿತು ಎಂದು ಪ್ರಾರ್ಥನಾ ಮಂದಿರದಲ್ಲಿ ಇದ್ದವರು ಹಾಗೂ ಈ ಪ್ರಾರ್ಥನಾ ಮಂದಿರದ ಅಕ್ಕಪಕ್ಕದ ಮನೆಗಳ ನಿವಾಸಿಗಳು ತಿಳಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸ್ಫೋಟ ಘಟನೆಯನ್ನು ದುರಾದೃಷ್ಟಕರ ಎಂದು ಹೇಳಿದ್ದಾರೆ. ತಮ್ಮ ಸರ್ಕಾರ ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ರೀತಿಯಲ್ಲಿ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ. ಕೇರಳ ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

ಕೇರಳ ರಾಜ್ಯದ ಆರೋಗ್ಯ ಸಚಿವರಾದ ವೀಣಾ ಜಾರ್ಜ್‌ ಅವರು ಸರ್ಕಾರಿ ಆಸ್ಪತ್ರೆಗಳ ಎಲ್ಲಾ ಸಿಬ್ಬಂದಿಗೆ ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ. ಭಾನುವಾರವಾದ್ದರಿಂದ ಬಹುತೇಕರು ರಜೆಯಲ್ಲಿದ್ದರು. ಆದರೆ ಸ್ಫೋಟದಂಥಾ ಗಂಭೀರ ಸನ್ನಿವೇಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ವೈದ್ಯರಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಿದೆ.

lokesh

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

35 mins ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

40 mins ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

45 mins ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

1 hour ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

13 hours ago