ಕೊಚ್ಚಿ: ಭಾನುವಾರದ ಪ್ರಾರ್ಥನೆ ವೇಳೆ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಫೋಟ ಸಂಭವಿಸಿದ ಘಟನೆ ಕೇರಳ ರಾಜ್ಯದ ಕಲಮಸ್ಸೆರಿ ಎಂಬಲ್ಲಿ ನಡೆದಿದೆ. ಕೆಲವೇ ನಿಮಿಷಗಳ ಅಂತರದಲ್ಲಿ ಮೂರು ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೇರಳ ರಾಜ್ಯದ ಕೊಚ್ಚಿಯಿಂದ 10 ಕಿ. ಮೀ. ದೂರದಲ್ಲಿ ಇರುವ ಕಲಮಸ್ಸೆರಿ ಎಂಬಲ್ಲಿ ಇರುವ ಜೆಹೋವಾಸ್ ವಿಟ್ನೆಸ್ ಕನ್ವೆನ್ಶನ್ ಸೆಂಟರ್ನಲ್ಲಿ ಈ ಘಟನೆ ನಡೆದಿದೆ. ಇದು ಕ್ರೈಸ್ತರ ಒಂದು ಪಂಗಡದ ಪ್ರಾರ್ಥನಾ ಮಂದಿರವಾಗಿದೆ. ಇಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿತ್ತು. ಪ್ರಾರ್ಥನೆಯ ಮಧ್ಯದಲ್ಲೇ ಸ್ಫೋಟ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸುಮಾರು 2 ಸಾವಿರ ಮಂದಿ ಈ ಪ್ರಾರ್ಥನಾ ಮಂದಿರಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸ್ಫೋಟ ಸಂಭವಿಸಿದ ಕೂಡಲೇ ಪ್ರಾರ್ಥನೆ ನಡೆಸುತ್ತಿದ್ದವರು ಪ್ರಾರ್ಥನಾ ಮಂದಿರದಿಂದ ಹೊರಗೆ ಓಡಿ ಬಂದರು. ಪ್ರಾರ್ಥನಾ ಮಂದಿರದ ಒಳಗೆ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಸ್ಫೋಟ ಸಂಭವಿಸಿದ ವೇಳೆ ಓರ್ವ ಗಾಯಗೊಂಡು 23 ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದೆ.
ಒಟ್ಟು ಮೂರು ಬಾರಿ ಸ್ಫೋಟ ಸಂಭವಿಸಿತು ಎಂದು ಪ್ರಾರ್ಥನಾ ಮಂದಿರದಲ್ಲಿ ಇದ್ದವರು ಹಾಗೂ ಈ ಪ್ರಾರ್ಥನಾ ಮಂದಿರದ ಅಕ್ಕಪಕ್ಕದ ಮನೆಗಳ ನಿವಾಸಿಗಳು ತಿಳಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸ್ಫೋಟ ಘಟನೆಯನ್ನು ದುರಾದೃಷ್ಟಕರ ಎಂದು ಹೇಳಿದ್ದಾರೆ. ತಮ್ಮ ಸರ್ಕಾರ ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ರೀತಿಯಲ್ಲಿ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ. ಕೇರಳ ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
ಕೇರಳ ರಾಜ್ಯದ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಅವರು ಸರ್ಕಾರಿ ಆಸ್ಪತ್ರೆಗಳ ಎಲ್ಲಾ ಸಿಬ್ಬಂದಿಗೆ ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ. ಭಾನುವಾರವಾದ್ದರಿಂದ ಬಹುತೇಕರು ರಜೆಯಲ್ಲಿದ್ದರು. ಆದರೆ ಸ್ಫೋಟದಂಥಾ ಗಂಭೀರ ಸನ್ನಿವೇಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ವೈದ್ಯರಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…