BREAKING NEWS

ಸಂಚಲನ ಮೂಡಿಸಿದ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ: ಸ್ಪಷ್ಟನೆ ನೀಡಿದ ಮಾಜಿ ಸಿಎಂ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕನ ಜೊತೆ ಭೇಟಿ ಮಾತುಕತೆ ಇಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು. ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕೀಯ ವಿಚಾರಗಳೇನು ಇಲ್ಲ, ಇದೊಂದು ಸೌಹಾರ್ದಯುತ ಭೇಟಿಯಷ್ಟೆ ಎಂದು ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಬಿಟ್ಟರೆ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಡಪಡಿಸಿದ್ದಾರೆ.

ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಹೊಂದಾಣಿಕೆ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಇಂದು ದುರ್ಗತಿ ಬಂದಿದೆ ಎಂದು ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿತ್ತು. ಈ ಮಧ್ಯೆ ಮಂಗಳವಾರ ಮಧ್ಯಾಹ್ನ ದಾವಣಗೆರೆಯಲ್ಲಿ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಅದಾದ ಬಳಿಕ ಸಾಯಂಕಾಲ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರ್ ಶಿವಶಂಕರಪ್ಪ ಅವರನ್ನು ರೆಸಾರ್ಟ್ ವೊಂದರಲ್ಲಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿತ್ತು ಭಾರೀ ಚರ್ಚೆ ಹುಟ್ಟುಹಾಕಿತ್ತು.

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್?ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೊಮ್ಮಾಯಿಯವರು ಮಾತು ಮುಗಿಸಿ ಹೊರಬರುತ್ತಿರುವ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago