BREAKING NEWS

ಸಂಚಲನ ಮೂಡಿಸಿದ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ: ಸ್ಪಷ್ಟನೆ ನೀಡಿದ ಮಾಜಿ ಸಿಎಂ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕನ ಜೊತೆ ಭೇಟಿ ಮಾತುಕತೆ ಇಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು. ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕೀಯ ವಿಚಾರಗಳೇನು ಇಲ್ಲ, ಇದೊಂದು ಸೌಹಾರ್ದಯುತ ಭೇಟಿಯಷ್ಟೆ ಎಂದು ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಬಿಟ್ಟರೆ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಡಪಡಿಸಿದ್ದಾರೆ.

ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಹೊಂದಾಣಿಕೆ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಇಂದು ದುರ್ಗತಿ ಬಂದಿದೆ ಎಂದು ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿತ್ತು. ಈ ಮಧ್ಯೆ ಮಂಗಳವಾರ ಮಧ್ಯಾಹ್ನ ದಾವಣಗೆರೆಯಲ್ಲಿ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಅದಾದ ಬಳಿಕ ಸಾಯಂಕಾಲ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರ್ ಶಿವಶಂಕರಪ್ಪ ಅವರನ್ನು ರೆಸಾರ್ಟ್ ವೊಂದರಲ್ಲಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿತ್ತು ಭಾರೀ ಚರ್ಚೆ ಹುಟ್ಟುಹಾಕಿತ್ತು.

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್?ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೊಮ್ಮಾಯಿಯವರು ಮಾತು ಮುಗಿಸಿ ಹೊರಬರುತ್ತಿರುವ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago