BREAKING NEWS

ಶರದ್ ಪವಾರ್ ಪ್ರತಿಪಕ್ಷಗಳ ಸಭೆಗೆ ಬರುತ್ತಾರೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಗೈರಾಗಲಿದ್ದಾರೆ ಎನ್ನುವ ವರದಿಗಳ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸ್ಪಷ್ಟನೆ ನೀಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಜುಲೈ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಸೋಮವಾರದ ವಿಪಕ್ಷಗಳ ಸಭೆಗೆ ಪವಾರ್ ಗೈರಾಗಿ, ಮಂಗಳವಾರ ಪಾಲ್ಗೊಳ್ಳಲಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ವಿರೋಧ ಪಕ್ಷಗಳ ಅಧಿಕೃತ ಸಭೆ ಮಂಗಳವಾರ ನಡೆಯಲಿದೆ. ಆದರೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಕೇವಲ ಔತಣಕೂಟವನ್ನು ಆಯೋಜಿಸುತ್ತಿದ್ದಾರೆ ಎಂದು ಹೇಳಿದರು.

ಮಾದ್ಯಮದವರೊಂದಿಗಿನ ಸಂವಾದದ ವೇಳೆ ಪವಾರ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ನಾನು ಹಿಂದಿನ ದಿನ ಪವಾರ್ ಜೊತೆ ಮಾತನಾಡಿದ್ದೇನೆ. ಇಂದು ಅಲ್ಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದೆ ಮತ್ತು ಅವರು ಇಂದು ಅಲ್ಲಿರಲು ಬಯಸುತ್ತಾರೆ. ಆದರೆ, ನಾಳೆ ಸಭೆಗೆ ಹಾಜರಾಗಲಿದ್ದಾರೆ. ಅವರು ಬರುವುದು ಮುಖ್ಯವಾಗಿದ್ದು, ಅವರನ್ನು ಕರೆದಿದ್ದೇನೆ. ಹೀಗಾಗಿ, ಅವರು ಜುಲೈ 18 ರಂದು ಬೆಳಿಗ್ಗೆ ಬರುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಯಾವುದೇ ತೊಂದರೆ ಇಲ್ಲ, ಎಲ್ಲರೂ ಬರುತ್ತಿದ್ದಾರೆ. ಮಮತಾ ಜಿ ಬರುತ್ತಿದ್ದಾರೆ, ಕೇಜ್ರಿವಾಲ್ ಜಿ ಬರುತ್ತಿದ್ದಾರೆ. ನಿತೀಶ್ ಜಿ, ತೇಜಸ್ವಿ ಜಿ, ಸ್ಟಾಲಿನ್ ಜಿ ಬರುತ್ತಿದ್ದಾರೆ. ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದವರಿಗಿಂತ ಹೆಚ್ಚು ಜನರು ನಮ್ಮೊಂದಿಗೆ ಸೇರುತ್ತಿದ್ದಾರೆ ಎಂದು ತಿಳಿಸಿದರು.

 

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago