ಬೆಂಗಳೂರು: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಅಂಗವಾಗಿ ವಿಧಾನಸೌಧದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹುಟ್ಟಿರದೆ ಇದ್ದರೆ ಭಾರತ ಏನಾಗಿರುತ್ತಿತ್ತು ಎನ್ನುವುದನ್ನು ಒಂದು ಕ್ಷಣ ಕಲ್ಪಿಸಿಕೊಂಡರೆ ನಮ್ಮೆಲ್ಲರ ಬದುಕಿನಲ್ಲಿ ಅವರ ಪಾತ್ರದ ಅರಿವಾಗಬಹುದು. ಈ ಕಾರಣಕ್ಕಾಗಿ ಜಾತಿ, ಧರ್ಮ, ಪಂಥ, ಪ್ರದೇಶವನ್ನು ಮೀರಿ ಭಾರತದ ನೆಲದಲ್ಲಿ ಹುಟ್ಟಿದವರು ಮತ್ತು ಹುಟ್ಟಲಿರುವವರೆಲ್ಲರೂ ಅಂಬೇಡ್ಕರ್ ಅವರಿಗೆ ಋಣಿಗಳಾಗಿರಬೇಕು ಎಂದು ಜನ್ಮ ದಿನದ ಅಂಗವಾಗಿ ನೆನೆದಿದ್ದಾರೆ.
ಹಳ್ಳಿಯಲ್ಲಿ ಕುರಿಕಾಯುತ್ತಿದ್ದ ನಾನು ಇಂದು ರಾಜ್ಯದ ಮುಖ್ಯಮಂತ್ರಿಯಾಗಿರುವುದು, ಮತ್ತು ರೈಲ್ವೆ ಸ್ಟೇಷನ್ ನಲ್ಲಿ ಚಹಾ ಮಾರುತ್ತಿದ್ದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿರುವುದು ಅಂಬೇಡ್ಕರ್ ಮತ್ತು ಅವರು ರಚಿಸಿ ಕೊಟ್ಟಿರುವ ಸಂವಿಧಾನದ ಕಾರಣಕ್ಕೆ. ಸಂವಿಧಾನದ ರಚನೆಯಲ್ಲಿ ಬಾಬಾಸಾಹೇಬರ ಪಾತ್ರವನ್ನು ಅವಗಣನೆ ಮಾಡುವವರು ಮತ್ತು ಸಂವಿಧಾನವನ್ನು ಬದಲಾಯಿಸಲು ಪಣತೊಟ್ಟವರು ನಿಜವಾದ ದೇಶದ್ರೋಹಿಗಳು. ಇಂತಹವರ ವಿರುದ್ಧದ ಹೋರಾಟಕ್ಕೆ ನಮಗೆ ಬಾಬಾಸಾಹೇಬರ ಚಿಂತನೆಗಳೇ ಅಸ್ತ್ರಗಳು. ಬಾಬಾ ಸಾಹೇಬರ ಜನ್ಮದಿನದ ಸಂದರ್ಭದಲ್ಲಿ ಸಂವಿಧಾನ ಉಳಿಸುವ ಪ್ರತಿಜ್ಞೆಗೈಯೋಣ. ಸರ್ವರಿಗೂ ಅಂಬೇಡ್ಕರ್ ಜಯಂತಿಯ ಶುಭಾಶಯಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…