ಬೆಂಗಳೂರು: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಅಂಗವಾಗಿ ವಿಧಾನಸೌಧದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹುಟ್ಟಿರದೆ ಇದ್ದರೆ ಭಾರತ ಏನಾಗಿರುತ್ತಿತ್ತು ಎನ್ನುವುದನ್ನು ಒಂದು ಕ್ಷಣ ಕಲ್ಪಿಸಿಕೊಂಡರೆ ನಮ್ಮೆಲ್ಲರ ಬದುಕಿನಲ್ಲಿ ಅವರ ಪಾತ್ರದ ಅರಿವಾಗಬಹುದು. ಈ ಕಾರಣಕ್ಕಾಗಿ ಜಾತಿ, ಧರ್ಮ, ಪಂಥ, ಪ್ರದೇಶವನ್ನು ಮೀರಿ ಭಾರತದ ನೆಲದಲ್ಲಿ ಹುಟ್ಟಿದವರು ಮತ್ತು ಹುಟ್ಟಲಿರುವವರೆಲ್ಲರೂ ಅಂಬೇಡ್ಕರ್ ಅವರಿಗೆ ಋಣಿಗಳಾಗಿರಬೇಕು ಎಂದು ಜನ್ಮ ದಿನದ ಅಂಗವಾಗಿ ನೆನೆದಿದ್ದಾರೆ.
ಹಳ್ಳಿಯಲ್ಲಿ ಕುರಿಕಾಯುತ್ತಿದ್ದ ನಾನು ಇಂದು ರಾಜ್ಯದ ಮುಖ್ಯಮಂತ್ರಿಯಾಗಿರುವುದು, ಮತ್ತು ರೈಲ್ವೆ ಸ್ಟೇಷನ್ ನಲ್ಲಿ ಚಹಾ ಮಾರುತ್ತಿದ್ದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿರುವುದು ಅಂಬೇಡ್ಕರ್ ಮತ್ತು ಅವರು ರಚಿಸಿ ಕೊಟ್ಟಿರುವ ಸಂವಿಧಾನದ ಕಾರಣಕ್ಕೆ. ಸಂವಿಧಾನದ ರಚನೆಯಲ್ಲಿ ಬಾಬಾಸಾಹೇಬರ ಪಾತ್ರವನ್ನು ಅವಗಣನೆ ಮಾಡುವವರು ಮತ್ತು ಸಂವಿಧಾನವನ್ನು ಬದಲಾಯಿಸಲು ಪಣತೊಟ್ಟವರು ನಿಜವಾದ ದೇಶದ್ರೋಹಿಗಳು. ಇಂತಹವರ ವಿರುದ್ಧದ ಹೋರಾಟಕ್ಕೆ ನಮಗೆ ಬಾಬಾಸಾಹೇಬರ ಚಿಂತನೆಗಳೇ ಅಸ್ತ್ರಗಳು. ಬಾಬಾ ಸಾಹೇಬರ ಜನ್ಮದಿನದ ಸಂದರ್ಭದಲ್ಲಿ ಸಂವಿಧಾನ ಉಳಿಸುವ ಪ್ರತಿಜ್ಞೆಗೈಯೋಣ. ಸರ್ವರಿಗೂ ಅಂಬೇಡ್ಕರ್ ಜಯಂತಿಯ ಶುಭಾಶಯಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…