ಮಂಗಳೂರು: ಕರಾವಳಿ ನಗರ ಮಂಗಳೂರಿಗೆ ವೇದ ಚಿತ್ರದ ಪ್ರಮೋಶನ್ ಗಾಗಿ ಆಗಮಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರ ತಂಡದ ಸಹಿತ ಇಲ್ಲಿನ ಪ್ರಸಿದ್ಧ ಕೊರಗಜ್ಜನ ಕ್ಷೇತ್ರ ಕುತ್ತಾರುಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಗೀತಾ ಹಾಗೂ ಮಗಳೊಂದಿಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಕೊರಗಜ್ಜ ದೈವಕ್ಕೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ವೇದ ಚಿತ್ರತಂಡದ ಸದಸ್ಯರೂ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕೊರಗಜ್ಜ ದೈವ ಈಗ ಕರ್ನಾಟಕದಾದ್ಯಂತ ಪ್ರಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲೂ ಕೊರಗಜ್ಜನ ಕಟ್ಟೆ ಕಟ್ಟಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ವೇದ ಚಿತ್ರದ ಪ್ರಮೋಷನ್ ಗಾಗಿ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡ ಮಂಗಳೂರಿಗೆ ಆಗಮಿಸಿದ್ದಾರೆ. ಪಣಂಬೂರು ಕಡಲಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ಎರ್ಪಡಿಸಲಾಗಿದೆ.
ಕುತ್ತಾರು ಕೊರಗಜ್ಜನ ದೈವಸ್ಥಾನ ಅತ್ಯಂತ ಕಾರಣಿಕ ಸ್ಥಳವಾಗಿದ್ದು ಇಲ್ಲಿ ಬಹಳಷ್ಟು ರೀತಿಯ ಸೇವೆಗಳು ನಡೆಯುತ್ತವೆ. ಇಲ್ಲಿ ಭಕ್ತರು ಅಂದುಕೊಂಡಿದ್ದು ನಡೆಯುವ ಪ್ರತೀತಿ ಇದೆ. ದೈವ ಸ್ಥಾನಕ್ಕೆ ನಿತ್ಯ ನೂರಾರು ಮಂದಿ ಭೇಟಿ ಕೊಡುತ್ತಾರೆ. ವಿವಾಹ, ಆರೋಗ್ಯ, ದಾಂಪತ್ಯ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರಣಗಳಿಗೆ ಹರಕೆ ಹೇಳುವ ಜನರು ಇಲ್ಲಿ ಬಂದು ಸೇವೆ ಸಲ್ಲಿಸಿ ಹೋಗುತ್ತಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…