ಮಂಗಳೂರು: ಕರಾವಳಿ ನಗರ ಮಂಗಳೂರಿಗೆ ವೇದ ಚಿತ್ರದ ಪ್ರಮೋಶನ್ ಗಾಗಿ ಆಗಮಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರ ತಂಡದ ಸಹಿತ ಇಲ್ಲಿನ ಪ್ರಸಿದ್ಧ ಕೊರಗಜ್ಜನ ಕ್ಷೇತ್ರ ಕುತ್ತಾರುಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಗೀತಾ ಹಾಗೂ ಮಗಳೊಂದಿಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಕೊರಗಜ್ಜ ದೈವಕ್ಕೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ವೇದ ಚಿತ್ರತಂಡದ ಸದಸ್ಯರೂ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕೊರಗಜ್ಜ ದೈವ ಈಗ ಕರ್ನಾಟಕದಾದ್ಯಂತ ಪ್ರಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲೂ ಕೊರಗಜ್ಜನ ಕಟ್ಟೆ ಕಟ್ಟಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ವೇದ ಚಿತ್ರದ ಪ್ರಮೋಷನ್ ಗಾಗಿ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡ ಮಂಗಳೂರಿಗೆ ಆಗಮಿಸಿದ್ದಾರೆ. ಪಣಂಬೂರು ಕಡಲಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ಎರ್ಪಡಿಸಲಾಗಿದೆ.
ಕುತ್ತಾರು ಕೊರಗಜ್ಜನ ದೈವಸ್ಥಾನ ಅತ್ಯಂತ ಕಾರಣಿಕ ಸ್ಥಳವಾಗಿದ್ದು ಇಲ್ಲಿ ಬಹಳಷ್ಟು ರೀತಿಯ ಸೇವೆಗಳು ನಡೆಯುತ್ತವೆ. ಇಲ್ಲಿ ಭಕ್ತರು ಅಂದುಕೊಂಡಿದ್ದು ನಡೆಯುವ ಪ್ರತೀತಿ ಇದೆ. ದೈವ ಸ್ಥಾನಕ್ಕೆ ನಿತ್ಯ ನೂರಾರು ಮಂದಿ ಭೇಟಿ ಕೊಡುತ್ತಾರೆ. ವಿವಾಹ, ಆರೋಗ್ಯ, ದಾಂಪತ್ಯ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರಣಗಳಿಗೆ ಹರಕೆ ಹೇಳುವ ಜನರು ಇಲ್ಲಿ ಬಂದು ಸೇವೆ ಸಲ್ಲಿಸಿ ಹೋಗುತ್ತಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…