ಮಂಗಳೂರು: ಕರಾವಳಿ ನಗರ ಮಂಗಳೂರಿಗೆ ವೇದ ಚಿತ್ರದ ಪ್ರಮೋಶನ್ ಗಾಗಿ ಆಗಮಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರ ತಂಡದ ಸಹಿತ ಇಲ್ಲಿನ ಪ್ರಸಿದ್ಧ ಕೊರಗಜ್ಜನ ಕ್ಷೇತ್ರ ಕುತ್ತಾರುಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಗೀತಾ ಹಾಗೂ ಮಗಳೊಂದಿಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಕೊರಗಜ್ಜ ದೈವಕ್ಕೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ವೇದ ಚಿತ್ರತಂಡದ ಸದಸ್ಯರೂ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕೊರಗಜ್ಜ ದೈವ ಈಗ ಕರ್ನಾಟಕದಾದ್ಯಂತ ಪ್ರಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲೂ ಕೊರಗಜ್ಜನ ಕಟ್ಟೆ ಕಟ್ಟಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ವೇದ ಚಿತ್ರದ ಪ್ರಮೋಷನ್ ಗಾಗಿ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡ ಮಂಗಳೂರಿಗೆ ಆಗಮಿಸಿದ್ದಾರೆ. ಪಣಂಬೂರು ಕಡಲಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ಎರ್ಪಡಿಸಲಾಗಿದೆ.
ಕುತ್ತಾರು ಕೊರಗಜ್ಜನ ದೈವಸ್ಥಾನ ಅತ್ಯಂತ ಕಾರಣಿಕ ಸ್ಥಳವಾಗಿದ್ದು ಇಲ್ಲಿ ಬಹಳಷ್ಟು ರೀತಿಯ ಸೇವೆಗಳು ನಡೆಯುತ್ತವೆ. ಇಲ್ಲಿ ಭಕ್ತರು ಅಂದುಕೊಂಡಿದ್ದು ನಡೆಯುವ ಪ್ರತೀತಿ ಇದೆ. ದೈವ ಸ್ಥಾನಕ್ಕೆ ನಿತ್ಯ ನೂರಾರು ಮಂದಿ ಭೇಟಿ ಕೊಡುತ್ತಾರೆ. ವಿವಾಹ, ಆರೋಗ್ಯ, ದಾಂಪತ್ಯ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರಣಗಳಿಗೆ ಹರಕೆ ಹೇಳುವ ಜನರು ಇಲ್ಲಿ ಬಂದು ಸೇವೆ ಸಲ್ಲಿಸಿ ಹೋಗುತ್ತಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…