BREAKING NEWS

ಕುತ್ತಾರು ಕೊರಗಜ್ಜನ ಸನ್ನಿಧಿಯಲ್ಲಿ ಶಿವಣ್ಣ ಪ್ರಾರ್ಥನೆ…

ಮಂಗಳೂರು: ಕರಾವಳಿ ನಗರ ಮಂಗಳೂರಿಗೆ ವೇದ ಚಿತ್ರದ ಪ್ರಮೋಶನ್‌ ಗಾಗಿ ಆಗಮಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರ ತಂಡದ ಸಹಿತ ಇಲ್ಲಿನ ಪ್ರಸಿದ್ಧ ಕೊರಗಜ್ಜನ ಕ್ಷೇತ್ರ ಕುತ್ತಾರುಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಗೀತಾ ಹಾಗೂ ಮಗಳೊಂದಿಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಕೊರಗಜ್ಜ ದೈವಕ್ಕೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ವೇದ ಚಿತ್ರತಂಡದ ಸದಸ್ಯರೂ ಪ್ರಾರ್ಥನೆಯಲ್ಲಿ ಭಾಗಿಯಾದರು.

ಕೊರಗಜ್ಜ ದೈವ ಈಗ ಕರ್ನಾಟಕದಾದ್ಯಂತ ಪ್ರಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲೂ ಕೊರಗಜ್ಜನ ಕಟ್ಟೆ ಕಟ್ಟಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ವೇದ ಚಿತ್ರದ ಪ್ರಮೋಷನ್ ಗಾಗಿ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡ ಮಂಗಳೂರಿಗೆ ಆಗಮಿಸಿದ್ದಾರೆ. ಪಣಂಬೂರು ಕಡಲಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ಎರ್ಪಡಿಸಲಾಗಿದೆ.

ಕುತ್ತಾರು ಕೊರಗಜ್ಜನ ದೈವಸ್ಥಾನ ಅತ್ಯಂತ ಕಾರಣಿಕ ಸ್ಥಳವಾಗಿದ್ದು ಇಲ್ಲಿ ಬಹಳಷ್ಟು ರೀತಿಯ ಸೇವೆಗಳು ನಡೆಯುತ್ತವೆ. ಇಲ್ಲಿ ಭಕ್ತರು ಅಂದುಕೊಂಡಿದ್ದು ನಡೆಯುವ ಪ್ರತೀತಿ ಇದೆ. ದೈವ ಸ್ಥಾನಕ್ಕೆ ನಿತ್ಯ ನೂರಾರು ಮಂದಿ ಭೇಟಿ ಕೊಡುತ್ತಾರೆ. ವಿವಾಹ, ಆರೋಗ್ಯ, ದಾಂಪತ್ಯ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರಣಗಳಿಗೆ ಹರಕೆ ಹೇಳುವ ಜನರು ಇಲ್ಲಿ ಬಂದು ಸೇವೆ ಸಲ್ಲಿಸಿ ಹೋಗುತ್ತಾರೆ.

andolana

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

50 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

2 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

2 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

11 hours ago