ಬ್ರಹ್ಮಾವರ(ಉಡುಪಿ): ಕಡಲತೀರದ ಭಾರ್ಗವ ಡಾ.ಶಿವರಾಮ ಕಾರಂತರ ಆಪ್ತ ಸಹಾಯಕಿ ಸಾಹಿತಿ, ಮಾಲಿನಿ ಮಲ್ಯ (72) ಅಸೌಖ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅವಿವಾಹಿತೆಯಾಗಿದ್ದರು.
ಮಾಲಿನಿ ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವರ್ಷದಿಂದ ಸಮಸ್ಯೆ ಹೆಚ್ಚಿದ ಕಾರಣ ಬೆಂಗಳೂರಿನಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಆರಂಭದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಬೆರಳಚ್ಚುಗಾರರಾಗಿ, ಅನಂತರ ಜೀವ ವಿಮಾ ನಿಗಮದಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಕಾರಂತರ ಆಪ್ತ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿದ್ದರು.
ಅವರು ‘ನಾನು ಕಂಡ ಕಾರಂತರು ಕೃತಿ‘ ಸೇರಿದಂತೆ 30ಕ್ಕೂ ಹೆಚ್ಚು ಪುಸ್ತಕಗಳು, ಗೊಂದಲಪುರದ ಗಿಂದಲರು, ದಾಂಪತ್ಯಗಾಥೆ ಕಾದಂಬರಿಗಳು, ಹಿಮಾಲಯ ಪ್ರವಾಸಿ ಕಥನ ರಚಿಸಿದ್ದರು.
ಕಾರಂತರ ನಿಧನದ ನಂತರ ಅವರು ವಾಸವಿದ್ದ ಸಾಲಿಗ್ರಾಮದ ಮನೆಯಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನವನ್ನು ಸ್ಥಾಪಿಸಿದ್ದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…