ಬನ್ನೇರುಘಟ್ಟ : ಬೆಂಗಳೂರು ದಕ್ಷಿಣ ಭಾಗದ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಶ್ರೀಂಗಧದ ಮರ ಕಳ್ಳತನ ಮಾಡುತ್ತಿದ್ದವರ ಮೇಲೆ ಫಾರೆಸ್ಟ್ಗಾರ್ಡ್ ಫೈರಿಂಗ್ ಮಾಡಿದ್ದು ಒಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೃತನ ಗುರುತು ಪತ್ತೆಯಾಗಿದ್ದು. 40 ವರ್ಷದ ತಿಮ್ಮರಾಯಪ್ಪ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಮಾಲೂರು ತಾಲ್ಲೂಕಿನ ಮಾಸ್ತಿ ಸಮೀಪದ ನಟ್ಟೂರಹಳ್ಳಿ ನಿವಾಸಿ. ಇನ್ನು ಇದೇ ಗಂಧದ ಮರ ಕಳ್ಳತನದ ಪ್ರಕರಣದಲ್ಲಿ ಕಳ್ಳರ ಬಗ್ಗೆ ಮಹತ್ವದ ಸುಳಿವು ಕೊಟ್ಟಿರುವುದು ಮರದ ಬಳಿ ತಿಂದು ಉಗಿದಿದ್ದ ಗುಟ್ಕಾ ಪ್ಯಾಕೆಟ್ ಗಳು
ಗಂಧದ ಚೋರರು ಗುಟ್ಕಾ ತಿಂದು, ನೀರಿನ ಬಾಟಲ್ ಅಲ್ಲೇ ಬಿಸಾಡಿದ್ದರು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳು ಇರುತ್ತಿರಲಿಲ್ಲ. ಆದರೆ ಗಂಧದ ಮರದ ಬುಡದಲ್ಲಿ ಬಿದ್ದಿದ್ದ ಗುಟ್ಕಾ ಪ್ಲಾಸ್ಟಿಕ್ ಕವರ್ ಪೊಲೀಸರ ಗಮನ ಸೆಳೆದಿತ್ತು. ಕಲ್ಕೆರೆ ಸ್ಟೇಟ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಗಂಧದ ಮರ ಕಳ್ಳತನ ನಡೆದಿತ್ತು. ಗಂಧದ ಮರ ಕಳ್ಳತನ ಪ್ರಕರಣಗಳು ಒಂದೂವರೆ ತಿಂಗಳಿಂದ ನಡೆದಿತ್ತು. ಗಂಧದ ಮರ ಕಳ್ಳರ ಬೆನ್ನುಹತ್ತಿತ್ತು. ಆದರೆ ನಿನ್ನೆ ರಾತ್ರಿ ಹತ್ತು ಘಂಟೆಯಿಂದ ವಾಚ್ ಮಾಡಲಾಗುತ್ತಿತ್ತು. ಬೀಟ್ ಫಾರೆಸ್ಟರ್ ಈ. ವಿನಯ್ ಕುಮಾರ್, ಪಿ.ಸಿ.ಬಿ ವಾಚರ್ ಗಳಾದ ಮೈಕಲ್, ಯಡಿಯೂರ ಕಾಡಿನಲ್ಲಿ ವಾಚ್ ಮಾಡುತ್ತಿದ್ದರು.
ಕಲ್ಕೆರೆ ಸ್ಟೇಟ್ ಫಾರೆಸ್ಟ್ ಜೇಡಿಮರ ವೃತ್ತದ ಬಳಿ ಬಂದಾಗ ಮರ ಕಡಿಯುತ್ತಿದ್ದುದು ಗಮನಕ್ಕೆ ಬಂದಿದೆ. ಕಳೆದ ರಾತ್ರಿ ಸಿಬ್ಬಂದಿ ಬೀಟ್ ಹಾಕುವ ವೇಳೆ ಕ್ಲ್ಯೂ ಸಿಕ್ಕಿತ್ತು. ವಿಮಲ್ ಗುಟ್ಕಾ ಹಾಗೂ ನೀರಿನ ಬಾಟಲುಗಳು ಮರದ ಬಳಿ ಸಿಕ್ಕಿತ್ತು. ಸಿಬ್ಬಂದಿ ಇದೇ ಮಾಹಿತಿ ಕಲೆ ಹಾಕಿ, ಮರಗಳ್ಳರ ಸುಳಿವು ಹಿಡಿದಿದ್ದರು.
ಇತ್ತೀಚೆಗೆ ಗಂಧದ ಮರಗಳು ಕಳ್ಳತನ ಆಗಿದ್ದವು. ಕಳ್ಳರನ್ನು ಬಂಧಿಸಲು ಸಿಬ್ಬಂದಿ ಇಡಿ ರಾತ್ರಿ ಕಾಡಿನಲ್ಲಿ ಓಡಾಡಿದ್ದರು. ಆಗ ಮರ ಕೊಯ್ಯುತ್ತಿರುವ ಶಬ್ದ ಕೇಳಿಸಿದೆ. ಕೂಡಲೇ ಫಾರೆಸ್ಟ್ ಗಾರ್ಡ್ ವಿನಯ್ ಹಾಗೂ ತಂಡ ಸ್ಥಳಕ್ಕೆ ಹೋಗಿತ್ತು. ಅರಣ್ಯ ಸಿಬ್ಬಂದಿಯನ್ನು ನೋಡುತ್ತಿದ್ದಂತೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಆಗ ಸಿಬ್ಬಂದಿ ಪಂಪ್ ಆಕ್ಷನ್ ಸ್ಲೈಡ್ ಗನ್ ಮೂಲಕ ಫೈರಿಂಗ್ ಮಾಡಿದ್ದಾರೆ. ಗನ್ ಮೂಲಕ ಹಾರಿದ್ದ ಗುಂಡು ತಿಮ್ಮರಾಯಪ್ಪನಿಗೆ ತಗುಲಿದೆ. ಹೊಟ್ಟೆ ಭಾಗಕ್ಕೆ ಗುಂಡು ಬಿದ್ದು ಸ್ಥಳದಲ್ಲೇ ಆತ ಸಾವಿಗೀಡಾಗಿದ್ದಾನೆ. ಒಬ್ಬ ಕೆಳಗೆ ಬೀಳುತ್ತಿದ್ದಂತೆ, ಇನ್ನೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…