BREAKING NEWS

ರಾಜ್ಯದಲ್ಲಿ ವೈದ್ಯರ ಕೊರತೆ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಮಂಗಳವಾರ ದಾಖಲಿಸಿಕೊಂಡಿದೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ವೈದ್ಯರು, ತಂತ್ರಜ್ಞರು ಮತ್ತು ವಿವಿಧ ಸಿಬ್ಬಂದಿ ಸೇರಿದಂತೆ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತು ಅಕ್ಟೋಬರ್ 16 ರಂದು ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ವರದಿಯನ್ನು ಉಲ್ಲೇಖಿಸಿದರು.

ನಂತರ, ಈ ಸುದ್ದಿ ವರದಿಯ ಆಧಾರದ ಮೇಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನೋಂದಾಯಿಸಲು ಮತ್ತು ಅದನ್ನು ನ್ಯಾಯಾಲಯದ ಮುಂದೆ ಇಡುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸೂಚಿಸಲಾಯಿತು.

ರಾಜ್ಯದಲ್ಲಿ ಗ್ರಾಮೀಣ ಭಾಗದ 454 ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದಲ್ಲದೆ, ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ದಾದಿಯರು, 1,517 ಲ್ಯಾಬ್ ತಂತ್ರಜ್ಞರು, 1,517 ಫಾರ್ಮಸಿ ಸಿಬ್ಬಂದಿ, 1,752 ಸಹಾಯಕ ಸಿಬ್ಬಂದಿ ಮತ್ತು 3,253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ವರದಿ ಪ್ರಕಟವಾಗಿರುವುದನ್ನು ಹೈಕೋರ್ಟ್ ಪೀಠ ಗಮನಿಸಿತು.

ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದ್ದು, ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಮುಂದಾಯಿತು. ಈ ವಿಚಾರದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ವಕೀಲ ಶ್ರೀಧರ್ ಪ್ರಭು ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಲಾಗಿದೆ.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago